ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ 
ದೇಶ

ಹಿರಿಯ ನಾಗರಿಕರಿಗೆ ಉಚಿತ ಬಸ್ ಸೇವೆ; ಇದು ಅಮ್ಮ ಬರ್ತ್'ಡೇ ಗಿಫ್ಟ್

2011ರ ವಿಧಾನಸಭಾ ಚುನಾವಣೆ ವೇಳೆ ನೀಡಲಾಗಿದ್ದ ಆಶ್ವಾಸನೆಯನ್ನು ಇದೀಗ ಮುಖ್ಯಮಂತ್ರಿ ಜಯಲಲಿತಾ ಅವರು ಈಡೇರಿಸಿದ್ದು, ಇನ್ನು ಮುಂದೆ ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಗಳು ಹಿರಿಯ ನಾಗರಿಕರಿಗೆ ಉಚಿತವಾಗಿ ಸೇವೆ ಸಲ್ಲಿಸಲಿದೆ...

ಚೆನ್ನೈ: 2011ರ ವಿಧಾನಸಭಾ ಚುನಾವಣೆ ವೇಳೆ ನೀಡಲಾಗಿದ್ದ ಆಶ್ವಾಸನೆಯನ್ನು ಇದೀಗ ಮುಖ್ಯಮಂತ್ರಿ ಜಯಲಲಿತಾ ಅವರು ಈಡೇರಿಸಿದ್ದು, ಇನ್ನು ಮುಂದೆ ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಗಳು ಹಿರಿಯ ನಾಗರಿಕರಿಗೆ ಉಚಿತವಾಗಿ ಸೇವೆ ಸಲ್ಲಿಸಲಿದೆ. 

ಇದೀಗ ತಮಿಳುನಾಡಿನ ಹಿರಿಯ ನಾಗರಿಕರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ಜಯಲಲಿತಾ ಅವರು ಒಪ್ಪಿಗೆ ಸೂಚಿಸಿದ್ದು, ಫೆಬ್ರವರಿ 24 ಜಯಲಲಿತಾ ಅವರು ಹುಟ್ಟುಹಬ್ಬದಂದು ಯೋಜನೆ ಅಧಿಕೃತವಾಗಿ ಜಾರಿಯಾಗಲಿದೆ. ಯೋಜನೆಯಡಿಯಲ್ಲಿ ಹಿರಿಯ ನಾಗರಿಕರು ತಿಂಗಳಿಗೆ 10 ಬಾರಿ ಉಚಿತವಾಗಿ ಸಂಚರಿಸಬಹುದಾಗಿದೆ.
ಯೋಜನೆಯ ಕುರಿತಂತೆ ಮಾಹಿತಿ ನೀಡಿರುವ ಜಯಲಲಿತಾ ಅವರು, ಹಿರಿಯ ನಾಗರಕರಿಗೆ ಫೋಟೋ ಇರುವ ಗುರ್ತಿನ ಕಾರ್ಡ್ ವೊಂದನ್ನು ನೀಡಲಾಗುತ್ತದೆ. ಪ್ರತಿ ತಿಂಗಳು 10 ಟೋಕನ್ ಗಳನ್ನು ನೀಡಲಾಗುತ್ತದೆ. ಈ ಟೋಕನ್ ಗಳನ್ನು ಬಸ್ ನಿರ್ವಾಹಕರಿಗೆ ನೀಡಿದರೆ ಯಾವುದೇ ಟಿಕೆಟ್ ಪಡೆಯುವ ಅವಶ್ಯಕತೆಗಳು ಇರುವುದಿಲ್ಲ. ಯೋಜನೆಯ ಫಲ ಪಡೆಯಲು ಬಯಸುವ ನಾಗರಿಕರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಇದಲ್ಲದೆ, ಅರ್ಜಿಗಳು ಬಸ್ ಡಿಪೋಗಳಲ್ಲೂ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಿದ್ದು, ಸಾರ್ವಜನಿಕರ ಪ್ರತಿಕ್ರಿಯೆ ನೋಡಿ ಇನ್ನಿತರೆ ಪ್ರದೇಶಗಳಲ್ಲು ಸೌಲಭ್ಯಗಳನ್ನು ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT