ಜೆಎನ್ ಯು ವಿವಿ ವಿದ್ಯಾರ್ಥಿ ಸಂಘಟನೆ ನಾಯಕನ ಬಂಧನ (ಸಂಗ್ರಹ ಚಿತ್ರ) 
ದೇಶ

ಜೆಎನ್ ಯು ವಿವಿ ತನಿಖಾ ಸಮಿತಿ ಎದುರು ಹಾಜರಾಗಲು ನಿರಾಕರಿಸಿದ ವಿದ್ಯಾರ್ಥಿಗಳು

ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ನಡೆದ ದೇಶವಿರೋಧಿ ಘಟನೆಯ ಕುರಿತು ವಿಚಾರಣೆ ನಡೆಸಲು ವಿಶ್ವವಿದ್ಯಾನಿಲಯ ತನಿಖಾ ಸಮಿತಿ ಎದುರು ಹಾಜರಾಗಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.

ನವದೆಹಲಿ: ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ನಡೆದ ದೇಶವಿರೋಧಿ ಘಟನೆಯ ಕುರಿತು ವಿಚಾರಣೆ ನಡೆಸಲು ಆಂತರಿಕವಾಗಿ ರಚೆನೆಯಾಗಿರುವ ವಿಶ್ವವಿದ್ಯಾನಿಲಯ ತನಿಖಾ ಸಮಿತಿ ಎದುರು ಹಾಜರಾಗಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.
ವಿದ್ಯಾರ್ಥಿ ಪರಿಷತ್ ನ ಸದಸ್ಯರನ್ನು ಸಮಿತಿಯ ಎದುರು ಹಾಜಾರಗಲು ಸೂಚಿಸಲಾಗಿತ್ತು, ತಮ್ಮನ್ನು ಅಮಾನತುಗೊಳಿಸಿರುವುದನ್ನು ಅನ್ಯಾಯ ಎಂದಿರುವ 8 ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ತನಿಖಾ ಸಮಿತಿಯ ಉದ್ದೇಶವನ್ನು ಪ್ರಶ್ನಿಸಿದ್ದು ತನಿಖಾ ಸಮಿತಿಯಲ್ಲಿ ಹೆಚ್ಚು ಸದಸ್ಯರನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದು ವಿದ್ಯಾರ್ಥಿಗಳ ಕತೆಯಾದರೆ ಇನ್ನು ತರಗತಿಗಳು ಹಾಳಾಗುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರಾಧ್ಯಾಪರಕರಲ್ಲೇ ಒಡಕು ಮೂಡಿದೆ. " ವಿಶ್ವವಿದ್ಯಾನಿಲಯ ರಚಿಸಿರುವ ಸಮಿತಿಯಲ್ಲಿ ಮೂರು ಸದಸ್ಯರಿದ್ದು ಎಲ್ಲಾ ಸದಸ್ಯರೂ ಒಂದೇ ವಿಭಾಗದವರಾಗಿದ್ದಾರೆ. ಗಂಭೀರ ವಿವಾದದ ತನಿಖೆ ನಡೆಸಲು ಸಮಿತಿಯಲ್ಲಿ ಹೊರಗಿನವರಿಗೂ ಅವಕಾಶ ನೀಡಬೇಕು ಎಂದು ಜೆಎನ್ ಯು ಟಿಚರ್ಸ್ ಸಂಘಟನೆಯ ಕಾರ್ಯದರ್ಶಿ ಬಿಕ್ರಮಾದಿತ್ಯ ಚೌಧರಿ ಹೇಳಿದ್ದಾರೆ.      
ವಿವಿಧ ಸಮಿತಿಗಳ ಸದಸ್ಯರನ್ನು ತನಿಖಾ ಸಮಿತಿಗೆ ನೇಮಿಸಬೇಕು ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದರೂ ಶೈಕ್ಷಣಿಕ ಕರ್ತವ್ಯಗಳನ್ನು ನಿರ್ವಹಿಸುತ್ತೇವೆ ನಮ್ಮ ಬೇಡಿಕೆಗಳನ್ನು ಉಪಕುಲಪತಿಗಳಿಗೆ ಸಲ್ಲಿಸಿದ್ದೇವೆ ಎಂದು  ಬಿಕ್ರಮಾದಿತ್ಯ ಚೌಧರಿ ತಿಳಿಸಿದ್ದಾರೆ. ಫೆ.9 ರಂದು ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ಕೆಲವು ವಿದ್ಯಾರ್ಥಿಗಳು ಉಗ್ರ ಅಫ್ಜಲ್ ಗುರು ನನ್ನು ಬೆಂಬಲಿಸಿ ದೇಶವಿರೋಧಿ ಘೋಷಣೆ ಕೂಗಿದ್ದ ಘಟನೆಗೆ ಸಂಬಂಧಿಸಿದಂತೆ ಜೆಎನ್ ಯು ವಿವಿ ವಿದ್ಯಾರ್ಥಿ ಸಂಘದ ಸದಸ್ಯರನ್ನು ವಿಶ್ವವಿದ್ಯಾನಿಲಯ ತನಿಖಾ ಸಮಿತಿ ಎದುರು ಹಾಜರಾಗಲು ಸೂಚಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT