ಜೆಎನ್ ಯು ವಿವಿ ವಿದ್ಯಾರ್ಥಿ ಸಂಘಟನೆ ನಾಯಕನ ಬಂಧನ (ಸಂಗ್ರಹ ಚಿತ್ರ) 
ದೇಶ

ಜೆಎನ್ ಯು ವಿವಿ ತನಿಖಾ ಸಮಿತಿ ಎದುರು ಹಾಜರಾಗಲು ನಿರಾಕರಿಸಿದ ವಿದ್ಯಾರ್ಥಿಗಳು

ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ನಡೆದ ದೇಶವಿರೋಧಿ ಘಟನೆಯ ಕುರಿತು ವಿಚಾರಣೆ ನಡೆಸಲು ವಿಶ್ವವಿದ್ಯಾನಿಲಯ ತನಿಖಾ ಸಮಿತಿ ಎದುರು ಹಾಜರಾಗಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.

ನವದೆಹಲಿ: ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ನಡೆದ ದೇಶವಿರೋಧಿ ಘಟನೆಯ ಕುರಿತು ವಿಚಾರಣೆ ನಡೆಸಲು ಆಂತರಿಕವಾಗಿ ರಚೆನೆಯಾಗಿರುವ ವಿಶ್ವವಿದ್ಯಾನಿಲಯ ತನಿಖಾ ಸಮಿತಿ ಎದುರು ಹಾಜರಾಗಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.
ವಿದ್ಯಾರ್ಥಿ ಪರಿಷತ್ ನ ಸದಸ್ಯರನ್ನು ಸಮಿತಿಯ ಎದುರು ಹಾಜಾರಗಲು ಸೂಚಿಸಲಾಗಿತ್ತು, ತಮ್ಮನ್ನು ಅಮಾನತುಗೊಳಿಸಿರುವುದನ್ನು ಅನ್ಯಾಯ ಎಂದಿರುವ 8 ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ತನಿಖಾ ಸಮಿತಿಯ ಉದ್ದೇಶವನ್ನು ಪ್ರಶ್ನಿಸಿದ್ದು ತನಿಖಾ ಸಮಿತಿಯಲ್ಲಿ ಹೆಚ್ಚು ಸದಸ್ಯರನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದು ವಿದ್ಯಾರ್ಥಿಗಳ ಕತೆಯಾದರೆ ಇನ್ನು ತರಗತಿಗಳು ಹಾಳಾಗುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರಾಧ್ಯಾಪರಕರಲ್ಲೇ ಒಡಕು ಮೂಡಿದೆ. " ವಿಶ್ವವಿದ್ಯಾನಿಲಯ ರಚಿಸಿರುವ ಸಮಿತಿಯಲ್ಲಿ ಮೂರು ಸದಸ್ಯರಿದ್ದು ಎಲ್ಲಾ ಸದಸ್ಯರೂ ಒಂದೇ ವಿಭಾಗದವರಾಗಿದ್ದಾರೆ. ಗಂಭೀರ ವಿವಾದದ ತನಿಖೆ ನಡೆಸಲು ಸಮಿತಿಯಲ್ಲಿ ಹೊರಗಿನವರಿಗೂ ಅವಕಾಶ ನೀಡಬೇಕು ಎಂದು ಜೆಎನ್ ಯು ಟಿಚರ್ಸ್ ಸಂಘಟನೆಯ ಕಾರ್ಯದರ್ಶಿ ಬಿಕ್ರಮಾದಿತ್ಯ ಚೌಧರಿ ಹೇಳಿದ್ದಾರೆ.      
ವಿವಿಧ ಸಮಿತಿಗಳ ಸದಸ್ಯರನ್ನು ತನಿಖಾ ಸಮಿತಿಗೆ ನೇಮಿಸಬೇಕು ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದರೂ ಶೈಕ್ಷಣಿಕ ಕರ್ತವ್ಯಗಳನ್ನು ನಿರ್ವಹಿಸುತ್ತೇವೆ ನಮ್ಮ ಬೇಡಿಕೆಗಳನ್ನು ಉಪಕುಲಪತಿಗಳಿಗೆ ಸಲ್ಲಿಸಿದ್ದೇವೆ ಎಂದು  ಬಿಕ್ರಮಾದಿತ್ಯ ಚೌಧರಿ ತಿಳಿಸಿದ್ದಾರೆ. ಫೆ.9 ರಂದು ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ಕೆಲವು ವಿದ್ಯಾರ್ಥಿಗಳು ಉಗ್ರ ಅಫ್ಜಲ್ ಗುರು ನನ್ನು ಬೆಂಬಲಿಸಿ ದೇಶವಿರೋಧಿ ಘೋಷಣೆ ಕೂಗಿದ್ದ ಘಟನೆಗೆ ಸಂಬಂಧಿಸಿದಂತೆ ಜೆಎನ್ ಯು ವಿವಿ ವಿದ್ಯಾರ್ಥಿ ಸಂಘದ ಸದಸ್ಯರನ್ನು ವಿಶ್ವವಿದ್ಯಾನಿಲಯ ತನಿಖಾ ಸಮಿತಿ ಎದುರು ಹಾಜರಾಗಲು ಸೂಚಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT