ಜೆಎನ್ ಯು ವಿವಿ ವಿದ್ಯಾರ್ಥಿ ಸಂಘಟನೆ ನಾಯಕನ ಬಂಧನ (ಸಂಗ್ರಹ ಚಿತ್ರ) 
ದೇಶ

ಜೆಎನ್ ಯು ವಿವಿ ತನಿಖಾ ಸಮಿತಿ ಎದುರು ಹಾಜರಾಗಲು ನಿರಾಕರಿಸಿದ ವಿದ್ಯಾರ್ಥಿಗಳು

ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ನಡೆದ ದೇಶವಿರೋಧಿ ಘಟನೆಯ ಕುರಿತು ವಿಚಾರಣೆ ನಡೆಸಲು ವಿಶ್ವವಿದ್ಯಾನಿಲಯ ತನಿಖಾ ಸಮಿತಿ ಎದುರು ಹಾಜರಾಗಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.

ನವದೆಹಲಿ: ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ನಡೆದ ದೇಶವಿರೋಧಿ ಘಟನೆಯ ಕುರಿತು ವಿಚಾರಣೆ ನಡೆಸಲು ಆಂತರಿಕವಾಗಿ ರಚೆನೆಯಾಗಿರುವ ವಿಶ್ವವಿದ್ಯಾನಿಲಯ ತನಿಖಾ ಸಮಿತಿ ಎದುರು ಹಾಜರಾಗಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.
ವಿದ್ಯಾರ್ಥಿ ಪರಿಷತ್ ನ ಸದಸ್ಯರನ್ನು ಸಮಿತಿಯ ಎದುರು ಹಾಜಾರಗಲು ಸೂಚಿಸಲಾಗಿತ್ತು, ತಮ್ಮನ್ನು ಅಮಾನತುಗೊಳಿಸಿರುವುದನ್ನು ಅನ್ಯಾಯ ಎಂದಿರುವ 8 ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ತನಿಖಾ ಸಮಿತಿಯ ಉದ್ದೇಶವನ್ನು ಪ್ರಶ್ನಿಸಿದ್ದು ತನಿಖಾ ಸಮಿತಿಯಲ್ಲಿ ಹೆಚ್ಚು ಸದಸ್ಯರನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದು ವಿದ್ಯಾರ್ಥಿಗಳ ಕತೆಯಾದರೆ ಇನ್ನು ತರಗತಿಗಳು ಹಾಳಾಗುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರಾಧ್ಯಾಪರಕರಲ್ಲೇ ಒಡಕು ಮೂಡಿದೆ. " ವಿಶ್ವವಿದ್ಯಾನಿಲಯ ರಚಿಸಿರುವ ಸಮಿತಿಯಲ್ಲಿ ಮೂರು ಸದಸ್ಯರಿದ್ದು ಎಲ್ಲಾ ಸದಸ್ಯರೂ ಒಂದೇ ವಿಭಾಗದವರಾಗಿದ್ದಾರೆ. ಗಂಭೀರ ವಿವಾದದ ತನಿಖೆ ನಡೆಸಲು ಸಮಿತಿಯಲ್ಲಿ ಹೊರಗಿನವರಿಗೂ ಅವಕಾಶ ನೀಡಬೇಕು ಎಂದು ಜೆಎನ್ ಯು ಟಿಚರ್ಸ್ ಸಂಘಟನೆಯ ಕಾರ್ಯದರ್ಶಿ ಬಿಕ್ರಮಾದಿತ್ಯ ಚೌಧರಿ ಹೇಳಿದ್ದಾರೆ.      
ವಿವಿಧ ಸಮಿತಿಗಳ ಸದಸ್ಯರನ್ನು ತನಿಖಾ ಸಮಿತಿಗೆ ನೇಮಿಸಬೇಕು ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದರೂ ಶೈಕ್ಷಣಿಕ ಕರ್ತವ್ಯಗಳನ್ನು ನಿರ್ವಹಿಸುತ್ತೇವೆ ನಮ್ಮ ಬೇಡಿಕೆಗಳನ್ನು ಉಪಕುಲಪತಿಗಳಿಗೆ ಸಲ್ಲಿಸಿದ್ದೇವೆ ಎಂದು  ಬಿಕ್ರಮಾದಿತ್ಯ ಚೌಧರಿ ತಿಳಿಸಿದ್ದಾರೆ. ಫೆ.9 ರಂದು ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ಕೆಲವು ವಿದ್ಯಾರ್ಥಿಗಳು ಉಗ್ರ ಅಫ್ಜಲ್ ಗುರು ನನ್ನು ಬೆಂಬಲಿಸಿ ದೇಶವಿರೋಧಿ ಘೋಷಣೆ ಕೂಗಿದ್ದ ಘಟನೆಗೆ ಸಂಬಂಧಿಸಿದಂತೆ ಜೆಎನ್ ಯು ವಿವಿ ವಿದ್ಯಾರ್ಥಿ ಸಂಘದ ಸದಸ್ಯರನ್ನು ವಿಶ್ವವಿದ್ಯಾನಿಲಯ ತನಿಖಾ ಸಮಿತಿ ಎದುರು ಹಾಜರಾಗಲು ಸೂಚಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT