ಸುಪ್ರೀಂಕೋರ್ಟ್ 
ದೇಶ

ಅರುಣಾಚಲದಲ್ಲಿ ನೂತನ ಸರ್ಕಾರ ರಚನೆಗೆ 'ಸುಪ್ರೀಂ' ಅಸ್ತು

ಅರುಣಾಚಲ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿ ನೂತನ ಸರ್ಕಾರ ರಚನೆಗೆ ಅವಕಾಶ ನೀಡಿದೆ...

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿ ನೂತನ ಸರ್ಕಾರ ರಚನೆಗೆ ಅವಕಾಶ ನೀಡಿದೆ.

ಅರುಣಾಚಲಪ್ರದೇಶದಲ್ಲಿ ಹೊಸ ಸರ್ಕಾರ ರಚನೆ ತಡೆಗೆ ಕಾಂಗ್ರೆಸ್ ಯತ್ನಿಸಿತ್ತು. ಇದೀಗ ಸುಪ್ರೀಂಕೋರ್ಟ್ ತಡೆಯಾಜ್ಞೆ ರದ್ದು ಪಡಿಸಿದ್ದು, ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ.

ಇತ್ತೀಚೆಗಷ್ಟೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಬೋಧಿಸದಂತೆ ರಾಜ್ಯಪಾಲರನ್ನು ತಡೆಯಲು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಇದೀಗ ನೂತನ ಸರ್ಕಾರ ರಚನೆಗೆ ಅವಕಾಶ ನೀಡಿದೆ.

ಬಂಡಾಯ ಕಾಂಗ್ರೆಸ್ಸಿನ ನಾಯಕ ಕಲಿಖೊ ಪುಲ್ ಅವರು 31 ಮಂದಿ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸಿದ್ದರು. ಈ ಪೈಕಿ 19 ಮಂದಿ ಬಂಡಾಯ ಕಾಂಗ್ರೆಸ್ಸಿಗರಾದರೆ, 11 ಮಂದಿ ಬಿಜೆಪಿ ಹಾಗೂ ಇಬ್ಬರು ಪಕ್ಷೇತರ ಶಾಸಕರಿದ್ದಾರೆ. ಇನ್ನು ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿರುವುದರಿಂದ ರಾಜ್ಯಪಾಲರಿಗೆ ಸರ್ಕಾರ ರಚನೆಗೆ ಅವಕಾಶ ಕೊಡಬಾರದು ಎಂದು ಕಾಂಗ್ರೆಸ್ ಸುಪ್ರೀಂಗೆ ಮನವಿ ಮಾಡಿತ್ತು.

ಮಾಜಿ ಮುಖ್ಯಮಂತ್ರಿ ನಬಮ್ ಟುಕಿ ಅವರ ಸಚಿವರ ಬಂಡಾಯ ಚಟುವಟಿಕೆಗಳ ಕಾರಣ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಹೀಗಾಗಿ ಅರುಣಾಚಲ ಪ್ರದೇಶದಲ್ಲಿ ಜನವರಿ 26ರಂದು ರಾಷ್ಟ್ರಪತಿ ಆಡಳಿತವನ್ನು ಹೇರಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT