ಆನೆ ದಾಳಿ (ಸಂಗ್ರಹ ಚಿತ್ರ) 
ದೇಶ

ಆನೆ ದಾಳಿಗೆ ಐದು ವರ್ಷದಲ್ಲಿ 176ಕ್ಕೂ ಹೆಚ್ಚು ಸಾವು

ಬೆಂಗಳೂರಿನಲ್ಲಿ ಚಿರತೆ ದಾಳಿ ಭಾರಿ ಸದ್ದು ಮಾಡುತ್ತಿದ್ದರೆ ಕೇರಳದಲ್ಲಿ ಮಾತ್ರ ಆನೆ ದಾಳಿಗೆ ಬಲಿಯಾದವರ ಸಂಖ್ಯೆ ದಿನೇ ದಿನೇ ಏರುತ್ತಿದೆ...

ತಿರುವನಂತಪುರ: ಬೆಂಗಳೂರಿನಲ್ಲಿ ಚಿರತೆ ದಾಳಿ ಭಾರಿ ಸದ್ದು ಮಾಡುತ್ತಿದ್ದರೆ ಕೇರಳದಲ್ಲಿ ಮಾತ್ರ ಆನೆ ದಾಳಿಗೆ ಬಲಿಯಾದವರ ಸಂಖ್ಯೆ ದಿನೇ ದಿನೇ ಏರುತ್ತಿದೆ.

ಹೆರಿಟೇಜ್ ಅನಿಮಲ್ ಟಾಸ್ಕ್ ಫೋರ್ಸ್ ನೀಡಿರುವ ಮಾಹಿತಿಯಂತೆ ಇತರೆ ಕಾಡು ಪ್ರಾಣಿಗಳ ದಾಳಿಗಿಂತ ಆನೆ ದಾಳಿಗೆ ಬಲಿಯಾದವರ ಸಂಖ್ಯೆಯೇ ಹೆಚ್ಚು ಎಂದು ತಿಳಿದುಬಂದಿದೆ. ಕೇವಲ ಕಳೆದ ಐದು ವರ್ಷದ ಅವಧಿಯಲ್ಲಿ ಆನೆ ದಾಳಿಗೆ ತುತ್ತಾಗಿ ಸುಮಾರು 176 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಂಕಿಅಂಶಗಳಿಂದ ತಿಳಿದುಬಂದಿದೆ. ಮೃತರಲ್ಲಿ 10 ಮಾವುತರು, 10 ಮಹಿಳೆಯರು, ಓರ್ವ ವಿದ್ಯಾರ್ಥಿನಿ, ಓರ್ವ ಪಶು ವೈದ್ಯ, ಓರ್ವ ಆನೆ ಮಾಲೀಕ ಮತ್ತು ಓರ್ವ ತರಕಾರಿ ಮಾರಾಟಗಾರ ಕೂಡ ಸೇರಿದ್ದಾನೆ. ಬಹುತೇಕ ದುರಂತಗಳು ಕೇರಳದ ಸಾಂಪ್ರದಾಯಿಕ ದೇವಾಲಯಗಳ ಉತ್ಸವಗಳಲ್ಲಿ ಉಂಟಾಗಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದೇ ದುರಂತಕ್ಕೆ ಕಾರಣ ಎಂದು ವರದಿಯಲ್ಲಿ ಹೇಳಲಾಗಿದೆ.

ಇನ್ನು ಸುಪ್ರೀಂಕೋರ್ಟ್ ನಿರ್ದೇಶನದಂತೆ ಆನೆಗಳನ್ನು ಬೆಳಗ್ಗೆ 8ರಿಂದ 11 ಗಂಟೆಯವರೆಗೆ ಮತ್ತು ಸಂಜೆ 5ರಿಂದ ರಾತ್ರಿ 8 ಗಂಟೆಯ ಒಳಗೆ ಮಾತ್ರ ಮೆರಣಿಗೆಗೆ ಕರೆದೊಯ್ಯಬೇಕು. ಅಲ್ಲದೆ ಮೆರವಣಿಗೆ ಕರೆದೊಯ್ಯುವ ಮುನ್ನ ಜಿಲ್ಲಾಡಳಿತದ ಅನುಮತಿ ಪಡೆಯಬೇಕು ಎಂಬ ಸೂಚನೆ ಇದೆ. ಆದರೆ ಬಹುತೇಕ ದೇವಾಲಯಗಳು ಮತ್ತು ಆನೆ ಮಾಲೀಕರು ನ್ಯಾಯಾಲಯದ ನಿರ್ದೇಶನವನ್ನು ಪಾಲನೆ ಮಾಡದೇ, ಜಿಲ್ಲಾಡಳಿತದಿಂದ ಯಾವುದೇ ರೀತಿಯ ಲಿಖಿತ ಅನುಮತಿ ಪಡೆಯದೇ ಆನೆಗಳನ್ನು ಬಳಕೆ ಮಾಡುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇನ್ನು ದೇವಾಲಯದ ಉತ್ಸವಗಳಲ್ಲಿ ರಾತ್ರಿಯಿಡೀ ಮೆರವಣಿಗೆ ಮಾಡುವುದರಿಂದ ಮತ್ತು ಮೆರವಣಿಗೆ ವೇಳೆ ಉಂಟಾಗುವ ಶಬ್ದ ಮಾಲೀನ್ಯದಿಂದ ಆನೆಗಳು ಕೆರಳುತ್ತವೆ. ಇದರಿಂದ ದುರಂತಗಳು ಸಂಭವಿಸುತ್ತವೆ ಎಂದು ಹೆರಿಟೇಜ್ ಅನಿಮಲ್ ಟಾಸ್ಕ್ ಫೋರ್ಸ್ ನ ಕಾರ್ಯದರ್ಶಿ ವಿಕೆ ವೆಂಕಟಾಚಲಂ ಅವರು ಹೇಳಿದ್ದಾರೆ.



ಕೇರಳದ ಐತಿಹಾಸಿಕ ದೇವಾಲಯ ಗುರುವಾಯೂರ್ ದೇವಾಲಯದಲ್ಲಿ ಅತಿ ಹೆಚ್ಚು ಅಂದರೆ 56 ಆನೆಗಳಿದ್ದು, ದೇವಾಲಯದ ಆಡಳಿತ ಸುಪ್ರೀಂಕೋರ್ಟ್ ನ ಸೂಚನೆಯನ್ನು ತಪ್ಪದೇ ಪಾಲಿಸುತ್ತಿದೆ. ಇದರಿಂದ ದೇವಾಲಯದಲ್ಲಿ ಆನೆ ದುರಂತಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದೇ ರೀತಿ ದೇವಸ್ವಂ ಬೋರ್ಡ್ ಅಡಿಯಲ್ಲಿ ಬರುವ ಎಲ್ಲ ದೇವಾಲಯಗಳೂ ನಿಯಮವನ್ನು ಪಾಲಿಸಿದರೆ ಖಂಡಿತಾ ಆನೆ ದುರಂತಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ವೆಂಕಟಾಚಲಂ ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!