ಜಾಟ್ ಸಮುದಾಯದಿಂದ ಪ್ರತಿಭಟನೆ(ಸಂಗ್ರಹ ಚಿತ್ರ) 
ದೇಶ

ಹಿಂಸೆಗೆ ತಿರುಗಿದ ಜಾಟ್ ಚಳುವಳಿ: ಪೊಲೀಸರ ಗುಂಡೇಟಿಗೆ ಓರ್ವ ಬಲಿ

ಜಾಟ್ ಸಮುದಾಯದ ಸದಸ್ಯರು ಕಳೆದ ಆರು ದಿನಗಳಿಂದ ಮೀಸಲಾತಿಗಾಗಿ ಆಗ್ರಹಿಸಿ ಹರಿಯಾಣದಲ್ಲಿ ನಡೆಸುತ್ತಿರುವ ಚಳವಳಿ ಹಿಂಸೆಗೆ ತಿರುಗಿದ್ದು...

ಚಂಡೀಗಢ/ರೋಹ್ತಕ್: ಜಾಟ್ ಸಮುದಾಯದ ಸದಸ್ಯರು ಕಳೆದ ಆರು ದಿನಗಳಿಂದ ಮೀಸಲಾತಿಗಾಗಿ ಆಗ್ರಹಿಸಿ ಹರಿಯಾಣದಲ್ಲಿ ನಡೆಸುತ್ತಿರುವ ಚಳವಳಿ ಹಿಂಸೆಗೆ ತಿರುಗಿದ್ದು, ಪೊಲೀಸರ ಗುಂಡೇಟಿಗೆ ಓರ್ವ ಬಲಿಯಾಗಿದ್ದಾರೆ.

ರೋಹ್ತಕ್​ನ ಮಹರ್ಷಿ ದಯಾನಂದ ವಿಶ್ವವಿದ್ಯಾಲಯ ಆವರಣದಲ್ಲಿ ಜಾಟ್ ಪ್ರತಿಭಟನಕಾರರು ಉಗ್ರಪ್ರತಿಭಟನೆ ನಡೆಸುತ್ತಿದ್ದು ಹರಿಯಾಣ ಸಚಿವ ಕ್ಯಾಪ್ಟನ್ ಅಭಿಮನ್ಯು ಮನೆಗೆ ಬೆಂಕಿ ಕೂಡಾ ಹಚ್ಚಿದ್ದಾರೆ. ಅಲ್ಲದೆ ರೋಹ್ತಕ್​ನಲ್ಲಿ ಪೊಲೀಸ್ ಇನ್​ಸ್ಪೆಕ್ಟರ್ ಜನರಲ್ ಕಚೇರಿ ಮೇಲೆ ಸುಮಾರು 5000 ಮಂದಿಯ ಗುಂಪು ಕಲ್ಲುಗಳನ್ನು ತೂರಿದ್ದಾರೆ. ಐಜಿಪಿ ಕಚೇರಿ ಗೇಟ್, ಪೊಲೀಸ್ ಜೀಪ್​ಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಗಳು ತಿಳಿಸಿವೆ.

ಉದ್ರಿಕ್ತ ಗುಂಪನ್ನು ಚದುರಿಸುವ ಸಲುವಾಗಿ ಐಜಿಪಿ ಕಚೇರಿಯ ಒಳಗಿನಿಂದ ಪೊಲೀಸರು ಗುಂಡು ಹಾರಿಸಿದ್ದು, ಪೊಲೀಸರ ಗುಂಡೇಟಿಗೆ ಓರ್ವ ಬಲಿಯಾಗಿ, ಇತರ 6 ಮಂದಿ ಗಾಯಗೊಂಡಿದ್ದಾರೆ.

ಜಾಟ್ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸುವ ಪ್ರಸ್ತಾಪವನ್ನು ಜಾಟ್ ಸಮುದಾಯ ತಿರಸ್ಕರಿಸಿತ್ತು. ಜಾಟ್ ಪ್ರತಿಭಟನೆಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಇಂಟರ್​ನೆಟ್ ಹಾಗೂ ಎಸ್​ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಿತ್ತು. ಪ್ರತಿಭಟನೆಯಿಂದಾಗಿ ರಸ್ತೆ ಮತ್ತು ರೈಲು ಸಂಚಾರವೂ ಅಸ್ತವ್ಯಸ್ತಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT