ಕನಯ್ಯಾ ಕುಮಾರ್ 
ದೇಶ

ಕನಯ್ಯಾ ಕುಮಾರ್ ಮೇಲಿನ ದಾಳಿ ಪೂರ್ವಯೋಜಿತ: ಎನ್‌ಹೆಚ್ ಆರ್‌ಸಿ ವರದಿ

ಜವಾಹರ್‌ಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ಮೇಲೆ ಪಟಿಯಾಲಾ ಹೌಸ್ ಕೋರ್ಟ್ ಆವರಣದಲ್ಲಿ ಹಲ್ಲೆ ಮಾಡಿದ್ದು ಪೂರ್ವಯೋಜಿತ ಕೃತ್ಯ...

ನವದೆಹಲಿ: ಜವಾಹರ್‌ಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ಮೇಲೆ ಪಟಿಯಾಲಾ ಹೌಸ್ ಕೋರ್ಟ್ ಆವರಣದಲ್ಲಿ ಹಲ್ಲೆ ಮಾಡಿದ್ದು ಪೂರ್ವಯೋಜಿತ ಕೃತ್ಯ ಎಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ (ಎನ್ ಹೆಚ್ ಆರ್ ಸಿ)ದ ವರದಿಯಲ್ಲಿ ಹೇಳಲಾಗಿದೆ.
ಫೆ. 17 ರಂದು ಪಟಿಯಾಲಾಹೌಸ್ ಕೋರ್ಟ್ ಆವರಣದಲ್ಲಿ ಕನಯ್ಯಾ ಮೇಲೆ ಹಲ್ಲೆ ನಡೆದಿದ್ದು ಪೊಲೀಸರ ನಿರ್ಲಕ್ಷ್ಯದಿಂದ. ದೆಹಲಿ ಪೊಲೀಸರ ಕಡೆಯಿಂದ ಗಂಭೀರವಾದ ಕರ್ತವ್ಯ ಲೋಪ ಸಂಭವಿಸಿದೆ ಎಂದು ಎನ್ ಹೆಚ್ ಆರ್ ಸಿ ಹೇಳಿದೆ.
ಆದಾಗ್ಯೂ, ಕನಯ್ಯಾ ಕುಮಾರ್ ಬರೆದಿದ್ದಾರೆ ಎಂದು ಹೇಳಲಾದ ಹೇಳಿಕೆಯೊಂದನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದರು. ಆದರೆ ಆ ಹೇಳಿಕೆಯನ್ನು ಪೊಲೀಸರ ಒತ್ತಾಯದ ಮೇರೆಗೆ ಕನಯ್ಯಾ ಬರೆದಿದ್ದಾರೆ ಎಂದು ಆಯೋಗ ಹೇಳಿದೆ. ಕನಯ್ಯಾ ಅವರನ್ನು ತಿಹಾರ್ ಜೈಲಿನಲ್ಲಿ ಭೇಟಿ ಮಾಡಿದ ನಂತರ ತಯಾರಿದ ವರದಿಯಲ್ಲಿ ಈ ಎಲ್ಲ ಕಾರ್ಯಗಳನ್ನು ಉಲ್ಲೇಖಿಸಲಾಗಿದೆ.  
ಈ ಘಟನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ರಾಜ್ಯ ಸರ್ಕಾರ, ಜೆಎನ್‌ಯು ಅಧಿಕಾರಿಗಳಿಗೆ ಮತ್ತು ದೆಹಲಿ ಪೊಲೀಸರಿಗೆ ಆಯೋಗ ನೋಟಿಸ್ ಕಳುಹಿಸಿದೆ. ಆಯೋಗದ ತನಿಖಾ ವರದಿಯ ಪ್ರತಿಯನ್ನು ಪೊಲೀಸ್ ಆಯುಕ್ತರಿಗೆ,  ಜೈಲು ಡಿಜಿ ಅವರಿಗೆ ಕಳುಹಿಸಿಕೊಟ್ಟ ಆಯೋಗ ಫೆ. 26ರೊಳಗೆ ಇದಕ್ಕೆ ಉತ್ತರಿಸಬೇಕಾಗಿ ಆದೇಶಿಸಿದೆ.
ಈ ವರದಿಯ ಪ್ರತಿಯನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೂ ನೇಡಲಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT