ಪ್ರತಿಭಟನಾ ನಿರತ ವಕೀಲರು 
ದೇಶ

ದೇಶವಿರೋಧಿ ಘೋಷಣೆ ವಿರೋಧಿಸಿ ದೆಹಲಿಯಲ್ಲಿ ವಕೀಲರಿಂದ ಪ್ರತಿಭಟನೆ

ದೇಶವಿರೋಧಿ ಘೋಷಣೆ ಕೂಗಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ನೂರಾರು ವಕೀಲರು ಇಂಡಿಯಾ ಗೆಟ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನವದೆಹಲಿ: ಜೆಎನ್ ಯು ಕ್ಯಾಂಪಸ್ ನಲ್ಲಿ ಡಿಎಸ್ ಯು ವಿದ್ಯಾರ್ಥಿಗಳು ದೇಶವಿರೋಧಿ ಘೋಷಣೆ ಕೂಗಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ನೂರಾರು ವಕೀಲರು ಇಂಡಿಯಾ ಗೆಟ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಡಿಎಸ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ನನ್ನು ಕೋರ್ಟ್ ಆವರಣದಲ್ಲೇ ಥಳಿಸಿದ್ದ ವಕೀಲರು ಸಹ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ವಂದೇ ಮಾತರಂ, ಪಾಕಿಸ್ತಾನ್ ಮುರ್ದಾಬಾದ್ ಎಂಬ ಘೋಷಣೆ ಕೂಗಿದ ವಕೀಲರು ತ್ರಿವರ್ಣ ಧ್ವಜ ಹಿಡಿದು ದೇಶವಿರೋಧಿಗಳನ್ನು ಪ್ರತಿಭಟಿಸಿದರು. 
ಕಾನೂನನ್ನು ವಕೀಲರಿಗಿಂತ ಚೆನ್ನಾಗಿ ತಿಳಿದಿರುವವರಿಲ್ಲ, ಕಾನೂನಿನ ಪ್ರಕಾರ ಕನ್ಹಯ್ಯ ಕುಮಾರ್ ಹಾಗೂ ಉಮರ್ ಖಾಲಿದ್ ಭಯೋತ್ಪಾದಕರು ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಕೀಲ ಸುರೇಶ್ ಸಿನ್ಹಾ ಹೇಳಿದ್ದಾರೆ. ದೇಶವಿರೋಧಿಗಳ ಮೇಲೆ ದಾಳಿ ಮುಂದುವರೆಸುವುದಾಗಿ ಪ್ರತಿಭಟನೆ ನಡೆಸಿದ ವಕೀಲರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT