ಪ್ರತಿಭಟನಾ ನಿರತ ವಕೀಲರು 
ದೇಶ

ದೇಶವಿರೋಧಿ ಘೋಷಣೆ ವಿರೋಧಿಸಿ ದೆಹಲಿಯಲ್ಲಿ ವಕೀಲರಿಂದ ಪ್ರತಿಭಟನೆ

ದೇಶವಿರೋಧಿ ಘೋಷಣೆ ಕೂಗಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ನೂರಾರು ವಕೀಲರು ಇಂಡಿಯಾ ಗೆಟ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನವದೆಹಲಿ: ಜೆಎನ್ ಯು ಕ್ಯಾಂಪಸ್ ನಲ್ಲಿ ಡಿಎಸ್ ಯು ವಿದ್ಯಾರ್ಥಿಗಳು ದೇಶವಿರೋಧಿ ಘೋಷಣೆ ಕೂಗಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ನೂರಾರು ವಕೀಲರು ಇಂಡಿಯಾ ಗೆಟ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಡಿಎಸ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ನನ್ನು ಕೋರ್ಟ್ ಆವರಣದಲ್ಲೇ ಥಳಿಸಿದ್ದ ವಕೀಲರು ಸಹ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ವಂದೇ ಮಾತರಂ, ಪಾಕಿಸ್ತಾನ್ ಮುರ್ದಾಬಾದ್ ಎಂಬ ಘೋಷಣೆ ಕೂಗಿದ ವಕೀಲರು ತ್ರಿವರ್ಣ ಧ್ವಜ ಹಿಡಿದು ದೇಶವಿರೋಧಿಗಳನ್ನು ಪ್ರತಿಭಟಿಸಿದರು. 
ಕಾನೂನನ್ನು ವಕೀಲರಿಗಿಂತ ಚೆನ್ನಾಗಿ ತಿಳಿದಿರುವವರಿಲ್ಲ, ಕಾನೂನಿನ ಪ್ರಕಾರ ಕನ್ಹಯ್ಯ ಕುಮಾರ್ ಹಾಗೂ ಉಮರ್ ಖಾಲಿದ್ ಭಯೋತ್ಪಾದಕರು ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಕೀಲ ಸುರೇಶ್ ಸಿನ್ಹಾ ಹೇಳಿದ್ದಾರೆ. ದೇಶವಿರೋಧಿಗಳ ಮೇಲೆ ದಾಳಿ ಮುಂದುವರೆಸುವುದಾಗಿ ಪ್ರತಿಭಟನೆ ನಡೆಸಿದ ವಕೀಲರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT