ಪ್ರತಿಭಟನಾಕಾರರು ಟಯರ್ಗೆ ಬೆಂಕಿ ಹಚ್ಚಿರುವುದು 
ದೇಶ

ಸಂಘರ್ಷಕ್ಕೆ ತಿರುಗಿದ ಜಾಟ್ ಪ್ರತಿಭಟನೆ; ಮೂರು ಸಾವು

ಸರ್ಕಾರಿ ಕೆಲಸ ಮತ್ತು ಶೈಕ್ಷಣಿಕ ಕೇಂದ್ರಗಳಲ್ಲಿ ಮೀಸಲಾತಿಗೆ ಬೇಡಿಕೆಯೊಡ್ಡಿ ಹರ್ಯಾಣದಲ್ಲಿ ಜಾಟ್ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ಸಂಘರ್ಷಕ್ಕೆ...

ಚಂಡೀಗಢ್: ಸರ್ಕಾರಿ ಕೆಲಸ ಮತ್ತು ಶೈಕ್ಷಣಿಕ ಕೇಂದ್ರಗಳಲ್ಲಿ ಮೀಸಲಾತಿಗೆ ಬೇಡಿಕೆಯೊಡ್ಡಿ ಹರ್ಯಾಣದಲ್ಲಿ ಜಾಟ್ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಕಾರರನ್ನು ನಿಯಂತ್ರಿಸಲು ಪೊಲೀಸರಿಗೆ ಅಸಾಧ್ಯವಾದಾಗ ಭಾರತೀಯ ಸೇನೆಯನ್ನು ಕರೆಯಲಾಯಿತು. ರೋಹ್ತಕ್  ಹರ್ಯಾಣದ ವಿತ್ತ ಸಚಿವ ಅಭಿಮನ್ಯು ಅವರ ವಸತಿ ಮುಂದೆ ಪ್ರತಿಭಟನೆ ನಡೆದಿದ್ದು, ಜನರನ್ನು ಚದುರಿಸಲು ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಗುಂಡು ಹಾರಾಟದಲ್ಲಿ ಮೂವರು ಸಾವನ್ನಪ್ಪಿದ್ದು, 25 ಮಂದಿಗೆ ತೀವ್ರ ಗಾಯಗಳಾಗಿವೆ. 
ಪ್ರತಿಭಟನಾನಿರತರು ಸಚಿವರ ಕಾರಿಗೆ ಕಿಚ್ಚಿಟ್ಟಿದ್ದು, ಇದೀಗ ದೆಹಲಿಯ ಸಮೀಪದಲ್ಲಿರುವ ಫರೀದಾಬಾದ್‌ಗೂ ಪ್ರತಿಭಟನೆ  ವ್ಯಾಪಿಸಿದೆ.  ರೋಹ್ತಕ್, ಬಿವಾನಿ ಮೊದಲಾದ ಸ್ಥಳಗಳಲ್ಲಿ ಪ್ರತಿಭಟನೆಯ ಕಿಚ್ಚು ತೀವ್ರವಾಗಿದ್ದರಿಂದ ಅಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಈ ಪ್ರದೇಶಗಳಲ್ಲಿ ಎಸ್ಸೆಮ್ಮೆಸ್ಸ್, ಇಂಟರ್‌ನೆಟ್ ಸೇವೆಗಳನ್ನು ಸರ್ಕಾರ ಅನಿಶ್ಚಿತ ಕಾಲದ ವರಗೆ ನಿಷೇಧಿಸಿದೆ.  
ಈ ಪ್ರತಿಭಟನೆಯನ್ನು ನಿಯಂತ್ರಿಸಲು ಅರೆ ಸೈನಿಕ ದಳವನ್ನು ಕಳುಹಿಸಿಕೊಡಿ ಎಂದು ಹರ್ಯಾಣ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಇದೀಗ ರೋಹ್ಟಕ್
ತಮ್ಮನ್ನು ಇತರ ಹಿಂದುಳಿದ ವರ್ಗ (ಒಬಿಸಿ)ಕ್ಕೆ ಸೇರಿಸುವ ವರೆಗೆ ತಾವು ಈ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಜಾಟ್ ಸಮುದಾಯದ ಈ  ಪ್ರತಿಭಟನೆಯಿಂದಾಗಿ ರೈಲು, ಸಾರಿಗೆ ಸಂಚಾರ ಸ್ಥಗಿತಗೊಂಡಿದೆ.
ಹರ್ಯಾಣ ದಾರಿಯಾಗಿ ಹಾದುಹೋಗುವ ಎಲ್ಲ ರೈಲುಗಳನ್ನು ಉತ್ತರ ರೈಲ್ವೇ ರದ್ದು ಮಾಡಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ವಾಹನಗಳ ಟಯರ್‌ಗಳನ್ನು ಪ್ರತಿಭಟನಾಕಾರರು ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ರಸ್ತೆ ಸಂಚಾರ ಸ್ಥಗಿತಗೊಂಡಿರುವ ಕಾರಣ ಹಾಲು, ಹಣ್ಣು ಮತ್ತು ತರಕಾರಿ ವಹಿವಾಟು ನಿಂತು ಹೋಗಿದೆ.  
ಆದಾಗ್ಯೂ, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹರ್ಯಾಣದ ಬಿಜೆಪಿ ಸರ್ಕಾರ ಪ್ರತಿಭಟನಾಕಾರರಿಗೆ ಮುನ್ನೆಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT