ಪ್ರತಿಭಟನಾಕಾರರು ಟಯರ್ಗೆ ಬೆಂಕಿ ಹಚ್ಚಿರುವುದು 
ದೇಶ

ಸಂಘರ್ಷಕ್ಕೆ ತಿರುಗಿದ ಜಾಟ್ ಪ್ರತಿಭಟನೆ; ಮೂರು ಸಾವು

ಸರ್ಕಾರಿ ಕೆಲಸ ಮತ್ತು ಶೈಕ್ಷಣಿಕ ಕೇಂದ್ರಗಳಲ್ಲಿ ಮೀಸಲಾತಿಗೆ ಬೇಡಿಕೆಯೊಡ್ಡಿ ಹರ್ಯಾಣದಲ್ಲಿ ಜಾಟ್ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ಸಂಘರ್ಷಕ್ಕೆ...

ಚಂಡೀಗಢ್: ಸರ್ಕಾರಿ ಕೆಲಸ ಮತ್ತು ಶೈಕ್ಷಣಿಕ ಕೇಂದ್ರಗಳಲ್ಲಿ ಮೀಸಲಾತಿಗೆ ಬೇಡಿಕೆಯೊಡ್ಡಿ ಹರ್ಯಾಣದಲ್ಲಿ ಜಾಟ್ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಕಾರರನ್ನು ನಿಯಂತ್ರಿಸಲು ಪೊಲೀಸರಿಗೆ ಅಸಾಧ್ಯವಾದಾಗ ಭಾರತೀಯ ಸೇನೆಯನ್ನು ಕರೆಯಲಾಯಿತು. ರೋಹ್ತಕ್  ಹರ್ಯಾಣದ ವಿತ್ತ ಸಚಿವ ಅಭಿಮನ್ಯು ಅವರ ವಸತಿ ಮುಂದೆ ಪ್ರತಿಭಟನೆ ನಡೆದಿದ್ದು, ಜನರನ್ನು ಚದುರಿಸಲು ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಗುಂಡು ಹಾರಾಟದಲ್ಲಿ ಮೂವರು ಸಾವನ್ನಪ್ಪಿದ್ದು, 25 ಮಂದಿಗೆ ತೀವ್ರ ಗಾಯಗಳಾಗಿವೆ. 
ಪ್ರತಿಭಟನಾನಿರತರು ಸಚಿವರ ಕಾರಿಗೆ ಕಿಚ್ಚಿಟ್ಟಿದ್ದು, ಇದೀಗ ದೆಹಲಿಯ ಸಮೀಪದಲ್ಲಿರುವ ಫರೀದಾಬಾದ್‌ಗೂ ಪ್ರತಿಭಟನೆ  ವ್ಯಾಪಿಸಿದೆ.  ರೋಹ್ತಕ್, ಬಿವಾನಿ ಮೊದಲಾದ ಸ್ಥಳಗಳಲ್ಲಿ ಪ್ರತಿಭಟನೆಯ ಕಿಚ್ಚು ತೀವ್ರವಾಗಿದ್ದರಿಂದ ಅಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಈ ಪ್ರದೇಶಗಳಲ್ಲಿ ಎಸ್ಸೆಮ್ಮೆಸ್ಸ್, ಇಂಟರ್‌ನೆಟ್ ಸೇವೆಗಳನ್ನು ಸರ್ಕಾರ ಅನಿಶ್ಚಿತ ಕಾಲದ ವರಗೆ ನಿಷೇಧಿಸಿದೆ.  
ಈ ಪ್ರತಿಭಟನೆಯನ್ನು ನಿಯಂತ್ರಿಸಲು ಅರೆ ಸೈನಿಕ ದಳವನ್ನು ಕಳುಹಿಸಿಕೊಡಿ ಎಂದು ಹರ್ಯಾಣ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಇದೀಗ ರೋಹ್ಟಕ್
ತಮ್ಮನ್ನು ಇತರ ಹಿಂದುಳಿದ ವರ್ಗ (ಒಬಿಸಿ)ಕ್ಕೆ ಸೇರಿಸುವ ವರೆಗೆ ತಾವು ಈ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಜಾಟ್ ಸಮುದಾಯದ ಈ  ಪ್ರತಿಭಟನೆಯಿಂದಾಗಿ ರೈಲು, ಸಾರಿಗೆ ಸಂಚಾರ ಸ್ಥಗಿತಗೊಂಡಿದೆ.
ಹರ್ಯಾಣ ದಾರಿಯಾಗಿ ಹಾದುಹೋಗುವ ಎಲ್ಲ ರೈಲುಗಳನ್ನು ಉತ್ತರ ರೈಲ್ವೇ ರದ್ದು ಮಾಡಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ವಾಹನಗಳ ಟಯರ್‌ಗಳನ್ನು ಪ್ರತಿಭಟನಾಕಾರರು ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ರಸ್ತೆ ಸಂಚಾರ ಸ್ಥಗಿತಗೊಂಡಿರುವ ಕಾರಣ ಹಾಲು, ಹಣ್ಣು ಮತ್ತು ತರಕಾರಿ ವಹಿವಾಟು ನಿಂತು ಹೋಗಿದೆ.  
ಆದಾಗ್ಯೂ, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹರ್ಯಾಣದ ಬಿಜೆಪಿ ಸರ್ಕಾರ ಪ್ರತಿಭಟನಾಕಾರರಿಗೆ ಮುನ್ನೆಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT