ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ಪಾರ್ಶ್ವನೋಟ 
ದೇಶ

ಆಲಿಘಡ ವಿ.ವಿ ಕ್ಯಾಂಟೀನ್ ಲ್ಲಿ ಬೀಫ್ ಬಿರಿಯಾನಿ ವಿತರಣೆ ಆರೋಪ: ಶಿಸ್ತು ಕ್ರಮಕ್ಕೆ ಬಿಜೆಪಿ ಒತ್ತಾಯ

ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ಜವಹರಲಾಲ್ ನೆಹರೂ ವೈದ್ಯಕೀಯ ಕಾಲೇಜಿನ ಕ್ಯಾಂಟೀನ್ ನಲ್ಲಿ ಗೋಮಾಂಸದ ಬಿರಿಯಾನಿ ವಿತರಿಸುವುದರ...

ಆಲಿಘಡ: ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ಜವಹರಲಾಲ್ ನೆಹರೂ ವೈದ್ಯಕೀಯ ಕಾಲೇಜಿನ ಕ್ಯಾಂಟೀನ್ ನಲ್ಲಿ  ಗೋಮಾಂಸದ ಬಿರಿಯಾನಿ ವಿತರಿಸುವುದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಾಯಕರು ಪೊಲೀಸರನ್ನು ಆಗ್ರಹಿಸಿದ್ದಾರೆ.

ಆಲಿಘಡ್ ನಗರದ ಮೇಯರ್ ನೇತೃತ್ವದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ದೂರು ಸಲ್ಲಿಸಿ ತಮ್ಮ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಬಿಜೆಪಿ ನಾಯಕರ ಆರೋಪವನ್ನು ವಿಶ್ವವಿದ್ಯಾಲಯ ಅಲ್ಲಗಳೆದಿದ್ದು, ಕ್ಯಾಂಟೀನ್ ನಲ್ಲಿ ತಯಾರಿಸಲಾಗುವ ಬಿರಿಯಾನಿಗೆ ಕೋಣದ ಮಾಂಸವನ್ನು ಮಾತ್ರ ಸೇರಿಸಲಾಗುತ್ತದೆ ಎಂದು ಹೇಳಿದೆ.

'' ಗೋಮಾಂಸವನ್ನು ಕ್ಯಾಂಟೀನ್ ನಲ್ಲಿ ನೀಡುತ್ತಿಲ್ಲ. ಅದು ಕೋಣದ ಮಾಂಸವಾಗಿದೆ. ಗೋಮಾಂಸವನ್ನು ವಿಶ್ವವಿದ್ಯಾಲಯದಲ್ಲಿ 1884ರಲ್ಲಿ ವಿದ್ಯಾಲಯದ ಸ್ಥಾಪಕ ಸರ್ ಸೈಯದ್ ಅಹ್ಮದ್ ಖಾನ್ ಅವರ ಅವಧಿಯಲ್ಲಿಯೇ ನಿಷೇಧಿಸಲಾಗಿದೆ. ಮುಸಲ್ಮಾನರು ಬಕ್ರೀದ್ ಆಚರಣೆ ಸಂದರ್ಭದಲ್ಲಿ ಕೂಡ ಗೋವುಗಳನ್ನು ಕೊಲ್ಲುವುದು ಹಾಗೂ ಗೋಮಾಂಸ ಸೇವನೆಯಿಂದ ದೂರವಿರಬೇಕೆಂದು ಮನವಿ ಮಾಡುತ್ತಿದ್ದರು. ಬರೇಲಿಯ ಮುಸ್ಲಿಮರು ಅವರ ಸಲಹೆಗಳನ್ನು ಪಾಲಿಸಿದಾಗ ಅವರಿಗೆ ಖುಷಿಯಾಗುತ್ತಿತ್ತು ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಆದರೆ ಆಲಿಘಡ ನಗರದ ಮೇಯರ್ ಬಿಜೆಪಿಯ ಶಕುಂತಲಾ ಬಾರ್ತಿ ಹೇಳುವ ಪ್ರಕಾರ, ಬಿರಿಯಾಲಿಯಲ್ಲಿ ದನದ ಮಾಂಸವಿರುತ್ತದೆ. ಕ್ಯಾಂಟೀನ್ ನ ಮೆನು ಪಟ್ಟಿಯಲ್ಲಿ ಪ್ರತ್ಯೇಕವಾಗಿ ಬೀಫ್ ಬಿರಿಯಾನಿ ಅಂತಲೇ ನಮೂದಿಸಿದ್ದಾರೆ. ಹಾಗಾಗಿ ನಾವು ಎಸ್ಪಿಯವರಿಗೆ ದೂರು ಸಲ್ಲಿಸಿದ್ದು, ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದೇವೆ. ಗೋಮಾಂಸ ಮತ್ತು ದನಗಳನ್ನು ಕಡಿಯುವುದನ್ನು ನಿಷೇಧಿಸಿರುವಾಗ ವಿಶ್ವವಿದ್ಯಾಲಯದ ಕ್ಯಾಂಟೀನ್ ನಲ್ಲಿ ಹೇಗೆ ನೀಡುತ್ತಾರೆ? ಎಂದು ಮೇಯರ್ ಪ್ರಶ್ನಿಸುತ್ತಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT