ಡಿಕೆ ಶಿವಕುಮಾರ್ 
ದೇಶ

ಕೇಂದ್ರದಿಂದ ರಾಜ್ಯಕ್ಕೆ 1,000 ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಡಿಕೆಶಿ ಮನವಿ

ಶರಾವತಿ ವಿದ್ಯುದಾಗಾರದಲ್ಲಿ ಅಗ್ನಿ ಅನಾಹುತ ಸಂಭವಿಸಿದ ಹಿನ್ನಲೆಯಲ್ಲಿ ರಾಜ್ಯಕ್ಕೆ ಹೆಚ್ಚು ವಿದ್ಯುತ್ ಪೂರೈಕೆ ಮಾಡುವಂತೆ ಕೋರಿ ಇಂಧನ...

ಬೆಂಗಳೂರು: ಶರಾವತಿ ವಿದ್ಯುದಾಗಾರದಲ್ಲಿ ಅಗ್ನಿ ಅನಾಹುತ ಸಂಭವಿಸಿದ ಹಿನ್ನಲೆಯಲ್ಲಿ ರಾಜ್ಯಕ್ಕೆ ಹೆಚ್ಚು ವಿದ್ಯುತ್ ಪೂರೈಕೆ ಮಾಡುವಂತೆ ಕೋರಿ ಇಂಧನ ಸಚಿವ ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಶನಿವಾರ ಕೇಂದ್ರ ಇಂಧನ ರಾಜ್ಯ ಸಚಿವ ಪೀಯುಷ್ ಗೋಯಲ್ ಅವರನ್ನು ಭೇಟಿ ಮಾಡಿದ್ದು, 1,000 ಮೆಗಾ ವ್ಯಾಟ್ ವಿದ್ಯುತ್ ಪೂರೈಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. 
ಶರಾವತಿ ವಿದ್ಯುದಾಗಾರದಲ್ಲಿ 1,035 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿತ್ತು. ಆದರೆ, ಬೆಂಕಿ ಅವಘಡ ಸಂಭವಿಸಿದ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಪೂರೈಕೆಗೆ ಅಡಚಣೆ ಉಂಟಾಗಿದೆ. 
ರಾಜ್ಯದಲ್ಲಿ ಈಗಾಗಲೇ ವಿದ್ಯುತ್ ಕೊರತೆ ಹೆಚ್ಚಾಗಿತ್ತು. ಇದರ ಬೆನ್ನಲ್ಲೇ, ಶರವಾತಿ ವಿದ್ಯುದಾಗಾರದಲ್ಲಿ ಅವಘಡ ಸಂಭವಿಸಿ ಸಂಪೂರ್ಣ ಭಸ್ಮವಾಗಿದೆ. ಇದನ್ನು ಸರಿಪಡಿಸಲು ನಾಲ್ಕೈದು ತಿಂಗಳು ಬೇಕಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ 1,000 ಮೆಗಾವ್ಯಾಟ್ ವಿದ್ಯುತ್ ಒದಗಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT