ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ 
ದೇಶ

ಜೆಎನ್ ಯು ವಿವಾದಕ್ಕೆ ಧರ್ಮ ಹಾಗೂ ಪ್ರಾಂತ್ಯದ ಸಂಬಂಧ ಕಲ್ಪಿಸಬೇಡಿ: ಪ್ರತಿಪಕ್ಷಗಳಿಗೆ ಬಿಜೆಪಿ ಮನವಿ

ಪ್ರತಿಪಕ್ಷಗಳು ಜೆಎನ್ ಯು ವಿವಾದಕ್ಕೆ ಧರ್ಮ ಹಾಗೂ ಪ್ರಾಂತ್ಯದ ಸಂಬಂಧ ಕಲ್ಪಿಸುತ್ತಿವೆ ಎಂದು ಆರೋಪಿಸಿರುವ ಬಿಜೆಪಿ, ಭಾರತ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದಿದೆ

ನವದೆಹಲಿ: ಪ್ರತಿಪಕ್ಷಗಳು ಜೆಎನ್ ಯು ವಿವಾದಕ್ಕೆ ಧರ್ಮ ಹಾಗೂ ಪ್ರಾಂತ್ಯದ ಸಂಬಂಧ ಕಲ್ಪಿಸುತ್ತಿವೆ ಎಂದು ಆರೋಪಿಸಿರುವ ಬಿಜೆಪಿ, ಭಾರತ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ, ಅಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶದ್ರೋಹ ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ, ದೇಶವಿರೋಧಿಗಳನ್ನು ರಕ್ಷಿಸಲು ಪ್ರತಿಪಕ್ಷಗಳು ಅನವಶ್ಯಕವಾಗಿ ಧರ್ಮ ಹಾಗೂ ಪ್ರಾಂತ್ಯದ ಸಂಬಂಧ ಕಲ್ಪಿಸುತ್ತಿವೆ ಎಂದಿದ್ದಾರೆ.
ಜೆಡಿಯು- ಆರ್ ಜೆ ಡಿ- ಕಾಂಗ್ರೆಸ್ ನೇತೃತ್ವದ ಸರ್ಕಾರವಿರುವ ಬಿಹಾರ ರಾಜ್ಯದಲ್ಲಿ ದೇಶವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಬಂಧನಕ್ಕೊಳಗಾದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ದೇಶದ್ರೋಹ ಕಾನೂನಿನ ಅಡಿ ಬಂಧನಕ್ಕೊಳಗಾಗಿರುವ 55 ಮಂದಿಗಳ ಪೈಕಿ 28 ಜನರು ಬಿಹಾರದವರು ಎಂದು ಶ್ರೀಕಾಂತ್ ಶರ್ಮಾ ಮಾಹಿತಿ ನೀಡಿದ್ದಾರೆ.
ಏಕತೆ ಮತ್ತು ಸಮಗ್ರತೆಗೆ ಸಂಬಂಧಿಸಿದ ದೇಶ ವಿರೋಧಿ ಘೋಷಣೆಯಂತಹ ಸೂಕ್ಷ್ಮ ವಿಷಯವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಓಮರ್ ಅಬ್ದುಲ್ಲಾ, ಅರವಿಂದ್ ಕೇಜ್ರಿವಾಲ್ ರಾಜಕೀಯಗೊಳಿಸಬಾರದು ಎಂದು ಶ್ರೀಕಾಂತ್ ಶರ್ಮಾ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT