ನರೇಂದ್ರ ಮೋದಿ 
ದೇಶ

ಟೀ ಮಾರುವವನು ಪ್ರಧಾನಿಯಾಗಿದ್ದನ್ನು ಸಹಿಸದೇ, ನನ್ನನ್ನು ಮುಗಿಸಲು ಸಂಚು ನಡೆಸಿದ್ದರು: ಮೋದಿ

ಒಬ್ಬ ಟೀ ಮಾರುವವನು ದೇಶದ ಪ್ರಧಾನಿಯಾಗಿರುವುದನ್ನು ಒಪ್ಪಿಕೊಳ್ಳಲು ಕೆಲವರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸರ್ಕಾರೇತರ ಸೇವಾ ಸಂಸ್ಥೆಗಳು ಒಟ್ಟಾಗಿ ನನ್ನ ಸರ್ಕಾರವನ್ನು ಅಸ್ಥಿರಗೊಳಿಸಲು...

ಒಡಿಶಾ: ಒಬ್ಬ ಟೀ ಮಾರುವವನು ದೇಶದ ಪ್ರಧಾನಿಯಾಗಿರುವುದನ್ನು ಒಪ್ಪಿಕೊಳ್ಳಲು ಕೆಲವರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸರ್ಕಾರೇತರ ಸೇವಾ ಸಂಸ್ಥೆಗಳು ಒಟ್ಟಾಗಿ ನನ್ನ ಸರ್ಕಾರವನ್ನು ಅಸ್ಥಿರಗೊಳಿಸಲು ಬಯಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಒಡಿಸ್ಸಾದಲ್ಲಿ ಪ್ರಧಾನ ಮಂತ್ರಿ ಭೀಮಾ ಫಸಲ್  ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ನಾನು ಪ್ರಯತ್ನಿಸುತ್ತಿರುವ ಕಾರಣ, ನಾನಾ ಶಕ್ತಿಗಳು ಒಂದಾಗಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಸುತ್ತಿವೆ ಎಂದು ಹೇಳಿದ್ದಾರೆ.

ಫೆಮಾ ಕಾಯಿದೆ ಉಲ್ಲಂಘನೆಗಾಗಿ ನಿಷೇಧಕ್ಕೊಳಗಾಗಿರುವ ಎನ್‌ಜಿಒಗಳು ಹಾಗೂ ಕಾಳಸಂತೆಕೋರರು ಒಟ್ಟಾಗಿ ಸಂಚು ರೂಪಿಸಿದ್ದಾರೆ. ಹಗಲಿರುಳೂ ನನ್ನ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ. ಸರಕಾರ ಬೀಳಿಸಲು ಹೊಂಚು ಹಾಕುತ್ತಿದ್ದಾರೆ. ನನ್ನ ಹೆಸರಿಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ,'' ಎಂದು ಮೋದಿ ಆರೋಪಿಸಿದ್ದಾರೆ.

ಇಂತಹ ಗೊಡ್ಡು ಬೆದರಿಕೆಗೆ ಹೆದರಿ ತಲೆ ಬಾಗುವುದಿಲ್ಲ. ಈ ದೇಶವನ್ನು ದೋಚಲು ಎಂದಿಗೂ ಬಿಡುವುದಿಲ್ಲ. ಜನ ನೀಡಿದ ಕೆಲಸ ನಿರ್ವಹಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಮೋದಿ ಸವಾಲು ಹಾಕಿದ್ದಾರೆ.

ವಿದೇಶಗಳಿಂದ ದೇಶದ ಸಾವಿರಾರು ಎನ್‌ಜಿಒಗಳಿಗೆ ಭಾರಿ ಹಣ ಹರಿದುಬರುತ್ತಿದೆ. ಅದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ಎಷ್ಟು ಹಣ ಬಂತು ಎಂಬ ಲೆಕ್ಕ ಕೊಡಿ ಎಂದು ಕೇಳಿದ್ದಕ್ಕೆ ಎನ್‌ಜಿಒಗಳು ತಿರುಗಿಬಿದ್ದಿವೆ. ಲೆಕ್ಕದ ಬಗ್ಗೆ ನಾವು ಪ್ರಶ್ನಿಸಿದಾಗಿನಿಂದಲೂ ಅವರ ಪಾಲಿಗೆ ನಾವು ಶತ್ರಗಳಾಗಿದ್ದೇವೆ. ಎನ್‌ಜಿಒಗಳೆಲ್ಲ ಸೇರಿ 'ಮೋದಿಗೆ ಹೊಡೆಯಿರಿ' (ಮೋದಿ ಕೊ ಮಾರೊ) ಎಂದು ಕೂಗಾಡುತ್ತಿವೆ. ಅವರು ಲೆಕ್ಕ ಕೊಡಬೇಕಾದದ್ದು ಕಾನೂನು. ಅದರಂತೆ ನಡೆಯಿರಿ ಎಂದು ನಾವು ಹೇಳಿದ್ದೇ ತಪ್ಪಾಯಿತೇ?,'' ಎಂದು ಅವರು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT