ನರೇಂದ್ರ ಮೋದಿ 
ದೇಶ

ಟೀ ಮಾರುವವನು ಪ್ರಧಾನಿಯಾಗಿದ್ದನ್ನು ಸಹಿಸದೇ, ನನ್ನನ್ನು ಮುಗಿಸಲು ಸಂಚು ನಡೆಸಿದ್ದರು: ಮೋದಿ

ಒಬ್ಬ ಟೀ ಮಾರುವವನು ದೇಶದ ಪ್ರಧಾನಿಯಾಗಿರುವುದನ್ನು ಒಪ್ಪಿಕೊಳ್ಳಲು ಕೆಲವರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸರ್ಕಾರೇತರ ಸೇವಾ ಸಂಸ್ಥೆಗಳು ಒಟ್ಟಾಗಿ ನನ್ನ ಸರ್ಕಾರವನ್ನು ಅಸ್ಥಿರಗೊಳಿಸಲು...

ಒಡಿಶಾ: ಒಬ್ಬ ಟೀ ಮಾರುವವನು ದೇಶದ ಪ್ರಧಾನಿಯಾಗಿರುವುದನ್ನು ಒಪ್ಪಿಕೊಳ್ಳಲು ಕೆಲವರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸರ್ಕಾರೇತರ ಸೇವಾ ಸಂಸ್ಥೆಗಳು ಒಟ್ಟಾಗಿ ನನ್ನ ಸರ್ಕಾರವನ್ನು ಅಸ್ಥಿರಗೊಳಿಸಲು ಬಯಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಒಡಿಸ್ಸಾದಲ್ಲಿ ಪ್ರಧಾನ ಮಂತ್ರಿ ಭೀಮಾ ಫಸಲ್  ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ನಾನು ಪ್ರಯತ್ನಿಸುತ್ತಿರುವ ಕಾರಣ, ನಾನಾ ಶಕ್ತಿಗಳು ಒಂದಾಗಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಸುತ್ತಿವೆ ಎಂದು ಹೇಳಿದ್ದಾರೆ.

ಫೆಮಾ ಕಾಯಿದೆ ಉಲ್ಲಂಘನೆಗಾಗಿ ನಿಷೇಧಕ್ಕೊಳಗಾಗಿರುವ ಎನ್‌ಜಿಒಗಳು ಹಾಗೂ ಕಾಳಸಂತೆಕೋರರು ಒಟ್ಟಾಗಿ ಸಂಚು ರೂಪಿಸಿದ್ದಾರೆ. ಹಗಲಿರುಳೂ ನನ್ನ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ. ಸರಕಾರ ಬೀಳಿಸಲು ಹೊಂಚು ಹಾಕುತ್ತಿದ್ದಾರೆ. ನನ್ನ ಹೆಸರಿಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ,'' ಎಂದು ಮೋದಿ ಆರೋಪಿಸಿದ್ದಾರೆ.

ಇಂತಹ ಗೊಡ್ಡು ಬೆದರಿಕೆಗೆ ಹೆದರಿ ತಲೆ ಬಾಗುವುದಿಲ್ಲ. ಈ ದೇಶವನ್ನು ದೋಚಲು ಎಂದಿಗೂ ಬಿಡುವುದಿಲ್ಲ. ಜನ ನೀಡಿದ ಕೆಲಸ ನಿರ್ವಹಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಮೋದಿ ಸವಾಲು ಹಾಕಿದ್ದಾರೆ.

ವಿದೇಶಗಳಿಂದ ದೇಶದ ಸಾವಿರಾರು ಎನ್‌ಜಿಒಗಳಿಗೆ ಭಾರಿ ಹಣ ಹರಿದುಬರುತ್ತಿದೆ. ಅದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ಎಷ್ಟು ಹಣ ಬಂತು ಎಂಬ ಲೆಕ್ಕ ಕೊಡಿ ಎಂದು ಕೇಳಿದ್ದಕ್ಕೆ ಎನ್‌ಜಿಒಗಳು ತಿರುಗಿಬಿದ್ದಿವೆ. ಲೆಕ್ಕದ ಬಗ್ಗೆ ನಾವು ಪ್ರಶ್ನಿಸಿದಾಗಿನಿಂದಲೂ ಅವರ ಪಾಲಿಗೆ ನಾವು ಶತ್ರಗಳಾಗಿದ್ದೇವೆ. ಎನ್‌ಜಿಒಗಳೆಲ್ಲ ಸೇರಿ 'ಮೋದಿಗೆ ಹೊಡೆಯಿರಿ' (ಮೋದಿ ಕೊ ಮಾರೊ) ಎಂದು ಕೂಗಾಡುತ್ತಿವೆ. ಅವರು ಲೆಕ್ಕ ಕೊಡಬೇಕಾದದ್ದು ಕಾನೂನು. ಅದರಂತೆ ನಡೆಯಿರಿ ಎಂದು ನಾವು ಹೇಳಿದ್ದೇ ತಪ್ಪಾಯಿತೇ?,'' ಎಂದು ಅವರು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT