ಆರೋಪಿ ವಿದ್ಯಾರ್ಥಿಗಳು 
ದೇಶ

ಜೆಎನ್ ಯು ವಿವಾದ: ಕುಲಸಚಿವರ ವಜಾಕ್ಕೆ ಆರೋಪಿ ವಿದ್ಯಾರ್ಥಿ ಆಗ್ರಹ

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ದೇಶ ವಿರೋಧಿ ಷೋಷಣೆ ಕೂಗಿದ ಆರೋಪ ಎದುರಿಸುತ್ತಿರುವ...

ನವದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ದೇಶ ವಿರೋಧಿ ಷೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಐವರು ವಿದ್ಯಾರ್ಥಿಗಳ ಪೈಕಿ ಒಬ್ಬರಾದ ಅನಂತ್ ಪ್ರಕಾಶ್ ಅವರು, ಘಟನೆ ಸಂಬಂಧಿಸಿದಂತೆ ವಿವಿ ಕುಲಪತಿ ಮಮಿದಲ ಜಗದೀಶ್ ಕುಮಾರ್ ಅವರು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ತಮ್ಮ ವಿರುದ್ಧ ನಡೆದ ಪಿತೂರಿಗೆ ಕುಲಸಚಿವ ಪ್ರೊ. ಬುಪಿಂದರ್ ಝುತ್ಶಿ ಅವರೇ ಕಾರಣವಾಗಿದ್ದು, ಅವರನ್ನು ಈ ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಅನಂತ್ ಪ್ರಕಾಶ್ ಆಗ್ರಹಿಸಿದ್ದಾರೆ.
ಸರ್ಕಾರದ ಉದ್ದೇಶ ಸ್ಪಷ್ಟವಾಗಿದ್ದು, ಜೆಎನ್ ಯು ನಾಯಕರನ್ನು ಟಾರ್ಗೆಟ್ ಮಾಡುವುದಕ್ಕೆ ಮತ್ತು ರಾಜಕೀಯ ಮಾಡುವುದನ್ನು ತಡೆಯಬೇಕು. ಹೀಗಾಗಿ ಕುಲಪತಿಗಳು ಈ ಸಂಬಂಧ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡಬೇಕು ಎಂದು ಪ್ರಕಾಶ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
'ವಿವಿಯಲ್ಲಿ ರಾಜಕೀಯ ಮಾಡಲಾಗುತ್ತಿದೆ. ನಾವು ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕೆ ನಮಗೆ ಶಿಕ್ಷೆ ನೀಡಲಾಗಿದೆ' ಎಂದು ಪ್ರಕಾಶ್ ಆರೋಪಿಸಿದ್ದಾರೆ.
ಉಮರ್‌ ಖಾಲಿದ್‌ ಸಹಿತ ದೇಶದ್ರೋಹದ ಆರೋಪಕ್ಕೆ ಗುರಿಯಾಗಿ ಭೂಗತರಾಗಿದ್ದ ಐವರು ಜೆಎನ್‌ಯು ವಿದ್ಯಾರ್ಥಿಗಳು ನಿನ್ನೆ ತಡ ರಾತ್ರಿ ವಿವಿ ಆವರಣದಲ್ಲಿ ಪ್ರತ್ಯಕ್ಷರಾಗಿದ್ದು, ಸುದ್ದಿ ತಿಳಿದೊಡನೆಯೇ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಳ್ಳಲು ಧಾವಿಸಿ ಬಂದಿದ್ದಾರೆ. ಆದರೆ ನಾವು ಪೊಲೀಸರಿಗೆ ಶರಣಾಗುವುದಿಲ್ಲ ; ಬೇಕಿದ್ದರೆ ಪೊಲೀಸರು ನಮ್ಮನ್ನು ಬಂಧಿಸಿ ಒಯ್ಯಲಿ' ಎಂದು ಈ ವಿದ್ಯಾರ್ಥಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT