ಭದ್ರತಾ ಸಿಬ್ಬಂದಿ 
ದೇಶ

ಪ್ಯಾಂಪೋರ್: ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯ, 3 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನ ಸರ್ಕಾರಿ ಕಟ್ಟಡವೊಂದರಲ್ಲಿ ಅಡಗಿದ್ದ ಶಂಕಿತ ಲಷ್ಕರ್ ಇ ತೋಯಿಬಾ ಸಂಘಟನೆಯ ಉಗ್ರರ ವಿರುದ್ಧದ ಕಾರ್ಯಾಚರಣೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನ ಸರ್ಕಾರಿ ಕಟ್ಟಡವೊಂದರಲ್ಲಿ ಅಡಗಿದ್ದ ಶಂಕಿತ ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರರ ವಿರುದ್ಧದ ಕಾರ್ಯಾಚರಣೆ ಸೋಮವಾರ ಅಂತ್ಯಗೊಂಡಿದ್ದು, ಸತತ 48 ಗಂಟೆಗಳ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳು ಖಚಿತಪಡಿಸಿವೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಮೂವರು ಉಗ್ರರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.ಸದ್ಯ ಕಟ್ಟಡದಲ್ಲಿ ಯಾವುದೇ ಉಗ್ರರಿಲ್ಲ ಎಂಬುದನ್ನು ಸೇನೆ ಖಚಿತಪಡಿಸಿಕೊಂಡಿರುವುದಾಗಿ ಮೇಜರ್ ಜನರಲ್ ಅರವಿಂದ್ ದತ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಜೆಕೆಇಡಿಐ ಸರ್ಕಾರಿ ಕಟ್ಟಡದಲ್ಲಿ ಅಡಗಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಆರ್ಮಿ ಕ್ಯಾಪ್ಟನ್ ಪವನ್ ಕುಮಾರ್ ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೆ 14 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ನಾಗರಿಕ ಸಹ ಸಾವನ್ನಪ್ಪಿದ್ದಾನೆ.
ಭಾನುವಾರ ಮತ್ತು ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಎಲ್ಲಾ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT