ಭದ್ರತಾ ಸಿಬ್ಬಂದಿ 
ದೇಶ

ಪ್ಯಾಂಪೋರ್: ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯ, 3 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನ ಸರ್ಕಾರಿ ಕಟ್ಟಡವೊಂದರಲ್ಲಿ ಅಡಗಿದ್ದ ಶಂಕಿತ ಲಷ್ಕರ್ ಇ ತೋಯಿಬಾ ಸಂಘಟನೆಯ ಉಗ್ರರ ವಿರುದ್ಧದ ಕಾರ್ಯಾಚರಣೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನ ಸರ್ಕಾರಿ ಕಟ್ಟಡವೊಂದರಲ್ಲಿ ಅಡಗಿದ್ದ ಶಂಕಿತ ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರರ ವಿರುದ್ಧದ ಕಾರ್ಯಾಚರಣೆ ಸೋಮವಾರ ಅಂತ್ಯಗೊಂಡಿದ್ದು, ಸತತ 48 ಗಂಟೆಗಳ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳು ಖಚಿತಪಡಿಸಿವೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಮೂವರು ಉಗ್ರರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.ಸದ್ಯ ಕಟ್ಟಡದಲ್ಲಿ ಯಾವುದೇ ಉಗ್ರರಿಲ್ಲ ಎಂಬುದನ್ನು ಸೇನೆ ಖಚಿತಪಡಿಸಿಕೊಂಡಿರುವುದಾಗಿ ಮೇಜರ್ ಜನರಲ್ ಅರವಿಂದ್ ದತ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಜೆಕೆಇಡಿಐ ಸರ್ಕಾರಿ ಕಟ್ಟಡದಲ್ಲಿ ಅಡಗಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಆರ್ಮಿ ಕ್ಯಾಪ್ಟನ್ ಪವನ್ ಕುಮಾರ್ ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೆ 14 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ನಾಗರಿಕ ಸಹ ಸಾವನ್ನಪ್ಪಿದ್ದಾನೆ.
ಭಾನುವಾರ ಮತ್ತು ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಎಲ್ಲಾ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT