ವಾರಣಾಸಿ: ಬನಾರಸ್ ಹಿಂದೂ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ ವಿದ್ಯಾರ್ಥಿ ನಾಯಕನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆಯೇ ಸಾರ್ವಜನಿಕರು ಥಳಿಸಿದ ಘಟನೆ ನಡೆದಿದೆ.
ಬನಾರಸ್ ಹಿಂದೂ ವಿವಿಯ ಘಟಿಕೋತ್ಸವದಲ್ಲಿ ಪಾಲ್ಗೊಂಡು ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದರು. ಈ ವೇಳೆ ಅಶುತೋಷ್ ಎಂಬ ವಿದ್ಯಾರ್ಥಿ ನಾಯಕ ಪ್ರಧಾನಿ ಮೋದಿ ತಮ್ಮ ಭಾಷಣ ಮುಗಿಸುತಿದ್ದಂತೆ ಚುನಾವಣೆ ಬೇಡಿಕೆ ಮುಂದಿರಿಸಿದ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದು ಕೊಂಡರು.
15 ನೇ ಶತಮಾನದ ಕವಿ ರವಿದಾಸ್ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲೂ ಮೋದಿ ಭಾಗವಹಿಸಲಿದ್ದಾರೆ.