ಕನ್ಹಯ್ಯ ಬಂಧನ ವಿರೋಧಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು(ಸಂಗ್ರಹ ಚಿತ್ರ) 
ದೇಶ

ಜೆಎನ್ ಯು ವಿವಾದ: ಕನ್ಹಯ್ಯ ದೇಶ ವಿರೋಧಿ ಘೋಷಣೆ ಸಾಬೀತುಪಡಿಸುವಲ್ಲಿ ಪೊಲೀಸರು ವಿಫಲ

ದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ...

ನವದೆಹಲಿ: ದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ದೇಶ ವಿರೋಧಿ ಘೋಷಣೆ ಕೂಗಿದ್ದನ್ನು ಸಾಬೀತುಪಡಿಸುವಲ್ಲಿ ದೆಹಲಿ ಪೊಲೀಸ್ ತನಿಖಾ ವರದಿ ವಿಫಲವಾಗಿದೆ.
ಜೆಎನ್ ಯು ದೇಶ ವಿರೋಧ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರತ್ಯಕ್ಷದರ್ಶಿಗಳು, ಸ್ಥಳದಲ್ಲಿದ್ದ ಪೊಲೀಸರು ಹಾಗೂ ಜೆಎನ್ ಯು ಸಿಬ್ಬಂದಿ ಸೇರಿದಂತೆ ಇದುವರೆಗೆ ಸಂಗ್ರಹಿಸಿದ ಸಾಕ್ಷ್ಯಗಳು ದೇಶ ವಿರೋಧಿ ಘೋಷಣೆ ಸಾಭೀತುಪಡಿಸುವಲ್ಲಿ ವಿಫಲವಾಗಿವೆ ಎಂದು ವರದಿ ಹೇಳಿದೆ.
ಜೆಎನ್ ಯುನಲ್ಲಿ ಫೆಬ್ರುವರಿ 9ರಂದು ನಡೆದ ಘಟನೆ ಬಗ್ಗೆ ಡಿಸಿಪಿ ನೇತೃತ್ವದ ತನಿಖಾ ತಂಡ ತಯಾರಿಸಿರುವ ವರದಿಯು ವಿದ್ಯಾರ್ಥಿಗಳು ಭಾರತ ವಿರೋಧಿ ಘೋಷಣೆ ಹಾಗೂ ಪ್ರಚೋದಕ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆಪಾದಿಸಿದೆ. ಆದರೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಬಗ್ಗೆ ಪ್ರಸ್ತಾಪವಿಲ್ಲ ಎಂದು ಹೇಳಿದೆ.
ಕನ್ಹಯ್ಯ ಕುಮಾರ್ ಸೇರದಿಂತೆ ಎಂಟು ವಿದ್ಯಾರ್ಥಿಗಳು ಅಸಂವಿಧಾನಿ ಘೋಷಣೆ ಕೂಗಿದ್ದಾರೆ ಎಂದು ಜೆಎನ್ ಯು ಆಂತರಿಕ ತನಿಖಾ ವರದಿ ಹೇಳಿರುವುದಾಗಿ ಪೊಲೀಸ್ ವರದಿಯಲ್ಲಿ ತಿಳಿಸಲಾಗಿದೆ.
ಸುದ್ದಿ ವಾಹಿನಿಯ ವಿಡಿಯೋ ಆಧರಿಸಿ ಕನ್ಹಯ್ಯ ಸೇರಿದಂತೆ ಎಂಟು ವಿದ್ಯಾರ್ಥಿಗಳ ವಿರುದ್ಧ ರಾಷ್ಟ್ರದ್ರೋಹ ಆರೋಪ ಹೊರಿಸಿಲಾಗಿದೆ. ಆದರೆ ಭಾನುವಾರ ದೆಹಲಿ ಪೊಲೀಸ್ ಆಯುಕ್ತರ ಕಚೇರಿಗೆ ಪೊಲೀಸರು ಸಲ್ಲಿಸರುವ ತನಿಖಾ ವರದಿಯು ಸುದ್ದಿವಾಹಿನಿಯ ವಿಡಿಯೋ ದೃಶ್ಯಕ್ಕೆ ೕಲಿಕೆಯಾಗುತ್ತಿಲ್ಲ. ಹೀಗಾಗಿ ರಾಷ್ಟ್ರದ್ರೋಹ ಪ್ರಕರಣ ಬಿದ್ದು ಹೋಗಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಪೊಲೀಸರು ತಮ್ಮ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್​ಐಆರ್) ಜೆಎನ್​ಯುು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಮತ್ತು ಇತರರ ವಿರುದ್ಧ ಭಾರತ ವಿರೋಧಿ ಘೋಷಣೆ  ಮತ್ತು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ  ಕೂಗಿದ್ದುದಾಗಿ ಆಪಾದಿಸಿದ್ದರು. ಘಟನೆಯ ಮರುದಿನ ಫೆಬ್ರುವರಿ 10ರಂದು ಝೀ ನ್ಯೂಸ್ ಪ್ರಸಾರ ಮಾಡಿದ್ದ ಸುದ್ದಿಯ ವಿಡಿಯೋದಲ್ಲಿ ಈ ವಿಚಾರ ಪ್ರಸಾರಗೊಂಡ ಬಳಿಕ ಪೊಲೀಸರು ಈ ಎಫ್​ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT