ಅಭಿವೃದ್ಧಿ ಉತ್ತೇಜನಕ್ಕೆ ಹೊಸ ರೈಲುಗಳನ್ನು ಘೋಷಿಸಿ: ತಜ್ಞರ ಸಲಹೆ 
ದೇಶ

ಅಭಿವೃದ್ಧಿ ಉತ್ತೇಜನಕ್ಕೆ ಹೊಸ ರೈಲುಗಳನ್ನು ಘೋಷಿಸಿ: ತಜ್ಞರ ಸಲಹೆ

ರೈಲು ಬಜೆಟ್ : ಜನಸಾಮಾನ್ಯರ ನಿರೀಕ್ಷೆಗಳೊಂದಿಗೆ ಅಭಿವೃದ್ಧಿಗೆ ಪೂರಕವಾಗುವ ಅನೇಕ ಸಹೆಗಳನ್ನು ತಜ್ಞರೂ ನೀಡುತ್ತಿದ್ದಾರೆ.

ಶಿವಮೊಗ್ಗ: ರೈಲ್ವೆ ಸಚಿವ ಸುರೇಶ್ ಪ್ರಭು ಬಜೆಟ್ ಮಂಡನೆ ಮಾಡುವುದಕ್ಕೆ ಇನ್ನೆರಡು ದಿನ ಬಾಕಿ ಇದ್ದು ಹೊಸ ರೈಲುಗಳ ಘೋಷಣೆ ಬಗ್ಗೆ ಜನರ ನಿರೀಕ್ಷೆಗಳು ಗರಿಗೆದರಿವೆ. ಜನಸಾಮಾನ್ಯರ ನಿರೀಕ್ಷೆಗಳೊಂದಿಗೆ ಅಭಿವೃದ್ಧಿಗೆ ಪೂರಕವಾಗುವ ಅನೇಕ ಸಲಹೆಗಳನ್ನು ತಜ್ಞರೂ ನೀಡುತ್ತಿದ್ದಾರೆ.
ಅತಿ ಹೆಚ್ಚು ಜನ ಸಂಚಾರ ಇರುವ ಶಿವಮೊಗ್ಗ- ಚಿತ್ರದುರ್ಗ ಮಾರ್ಗದಲ್ಲಿ ಹೊಸ ರೈಲುಗಳನ್ನು ಘೋಷಿಸಿದರೆ ವ್ಯಾಪಾರ-ವಹಿವಾಟುಗಳಿಗೆ ಅನುಕೂಲವಾಗುತ್ತದೆ ಈ ಮೂಲಕ ಅಭಿವೃದ್ಧಿಯೂ ಸಾಧ್ಯವಾಗುತ್ತದೆ ರೈಲು ಸಂಪರ್ಕ ಕಡಿಮೆ ಇರುವ ಎರಡು ನಗರಗಳನ್ನು ಸಂಪರ್ಕಿಸುವ ರೈಲುಗಳನ್ನು ಪರಿಚಯಿಸುವತ್ತ ರೈಲ್ವೆ ಸಚಿವ ಸುರೇಶ್ ಪ್ರಭು ಗಮನ ಹರಿಸಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಚಿತ್ರದುರ್ಗ ಮೂಲಕ ಶಿವಮೊಗ್ಗ-ಬಳ್ಳಾರಿ ರಸ್ತೆ ಮಾರ್ಗದಲ್ಲಿ ಪ್ರತಿ 20 ನಿಮಿಷಕ್ಕೊಂದು ಬಸ್ ಸಂಚರಿಸುತ್ತವೆ. ಚಿಕ್ಕಜಾಜೂರು ಮೂಲಕ  ಶಿವಮೊಗ್ಗ-ಬಳ್ಳಾರಿಗೆ ಹೆಚ್ಚು ರೈಲು ಸಂಚಾರ ಕಲ್ಪಿಸಿದರೆ ಎರಡು ನಗರಗಳಲ್ಲಿನ ವಾಣಿಜ್ಯ, ವ್ಯಾಪಾರ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಪ್ರಸ್ತುತ ಚಿಕ್ಕಜಾಜೂರುನಿಂದ ಬಳ್ಳಾರಿಗೆ ಪ್ಯಾಸೆಂಜರ್ ರೈಲು ಸಂಚರಿಸುತ್ತಿದ್ದು  6 ಗಂಟೆಗಳ ಕಾಲ ಸಂಚಾರ ಮಾಡಬೇಕಾಗುತ್ತದೆ. ಪ್ಯಾಸೆಂಜರ್ ರೈಲುಗಳಿಗಿಂತ ಹೆಚ್ಚು ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಘೋಷಿಸಿದರೆ ಉತ್ತಮ ಎಂದು ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT