ದೇಶದ ದ್ರೋಹದ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಗಳು 
ದೇಶ

ಉಮರ್ ಖಲೀದ್ ಗೆ ರಕ್ಷಣೆ ನೀಡಲು ಹೈಕೋರ್ಟ್ ನಕಾರ, ಶರಣಾಗುವಂತೆ ಜೆಎನ್​ಯುು ವಿದ್ಯಾರ್ಥಿಗಳಿಗೆ ಸೂಚನೆ

ದೇಶ ದ್ರೋಹದ ಆರೋಪ ಎದುರಿಸುತ್ತಿರುವ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್​ಯುು) ವಿದ್ಯಾರ್ಥಿಗಳಾದ ಉಮರ್ ಖಲೀದ್ ಹಾಗೂ ಅನಿರ್ಬನ್...

ನವದೆಹಲಿ: ದೇಶ ದ್ರೋಹದ ಆರೋಪ ಎದುರಿಸುತ್ತಿರುವ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್​ಯುು) ವಿದ್ಯಾರ್ಥಿಗಳಾದ ಉಮರ್ ಖಲೀದ್ ಹಾಗೂ ಅನಿರ್ಬನ್ ಭಟ್ಟಾಚಾರ್ಯ ಅವರಿಗೆ ಬಂಧನ ವಿರುದ್ಧ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್, ಪೊಲೀಸರ ಮುಂದೆ ಶರಣಾಗುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದೆ.
ಪೊಲೀಸರಿಗೆ ಶರಣಾಗುವ ಮುನ್ನ ತಮಗೆ ಪೊಲೀಸ್ ರಕ್ಷಣೆ ಕೋರಿ ಉಮರ್ ಖಲೀದ್  ಹಾಗೂ ಅನಿರ್ಬನ್ ಭಟ್ಟಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ತಮ್ಮ ಆಯ್ಕೆಯ ಸ್ಥಳದಲ್ಲಿ ಪೊಲೀಸರಿಗೆ ಶರಣಾಗತರಾಗುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಆದರೆ ಪೊಲೀಸರು ಈ ಸಲಹೆಯನ್ನು ವಿರೋಧಿಸಿದ್ದಾರೆ.
ಬಂಧನದ ವಿರುದ್ಧ ರಕ್ಷಣೆ ನೀಡುವಂತೆ ಜೆಎನ್ ಯು ವಿದ್ಯಾರ್ಥಿಗಳು ಸಲ್ಲಿಸಿದ ಮನವಿಯನ್ನು ಬುಧವಾರ ಆಲಿಸುವುದಾಗಿ ಹೈಕೋರ್ಟ್ ಹೇಳಿದೆ.
ಇದಕ್ಕೆ ಮುನ್ನ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಜಾಮೀನಿಗೆ ದೆಹಲಿ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT