ರಾಷ್ಟ್ರದ್ರೋಹ ಪ್ರಕರಣ ಹಿಂಪಡೆಯುವುದು ನಮ್ಮ ಕೈಯಲ್ಲಿಲ್ಲ: ಜೆಎನ್ ಯು 
ದೇಶ

ರಾಷ್ಟ್ರದ್ರೋಹ ಪ್ರಕರಣ ಹಿಂಪಡೆಯುವುದು ನಮ್ಮ ಕೈಯಲ್ಲಿಲ್ಲ: ಜೆಎನ್ ಯು

ಜೆಎನ್ ಯು ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ದಾಖಲಾಗಿರುವ ರಾಷ್ಟ್ರದ್ರೋಹ ಪ್ರಕರಣವನ್ನು ಹಿಂಪಡೆಯುವುದು ಹಾಗೂ ಆತನನ್ನು ಬಿಡುಗಡೆಗೊಳಿಸುವುದಾವುದು ನಮ್ಮ ಕೈಯಲ್ಲಿಲ್ಲ ಎಂದು ಜೆಎನ್ ಯು ಮಂಗಳವಾರ ಹೇಳಿದೆ...

ನವದೆಹಲಿ: ಜೆಎನ್ ಯು ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ದಾಖಲಾಗಿರುವ ರಾಷ್ಟ್ರದ್ರೋಹ ಪ್ರಕರಣವನ್ನು ಹಿಂಪಡೆಯುವುದು ಹಾಗೂ ಆತನನ್ನು ಬಿಡುಗಡೆಗೊಳಿಸುವುದಾವುದು ನಮ್ಮ ಕೈಯಲ್ಲಿಲ್ಲ ಎಂದು ಜೆಎನ್ ಯು ಮಂಗಳವಾರ ಹೇಳಿದೆ. 
ಪ್ರಕರಣ ಸಂಬಂಧ ಮಾತನಾಡಿರುವ ಜೆಎನ್ ಯು ರಿಜಿಸ್ಟ್ರಾರ್ ಭುಪಿಂದರ್ ಝುತ್ಶಿ ಅವರು, ನಾವು ಕನ್ಹಯ್ಯ ಕುಮಾರ್'ನನ್ನು ಬಂಧಿಸಿಲ್ಲ. ನಾವು ಯಾರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣವನ್ನು ದಾಖಲಿಸಿಲ್ಲ. ಪ್ರಕರಣ ಸಂಬಂಧ ಕ್ರಮ ಕೈಗೊಂಡಿರುವುದು ಪೊಲೀಸರು ಹಾಗೂ ನ್ಯಾಯಾಲಯ. ಎರಡೂ ವಿಚಾರಗಳು ನಮ್ಮ ನಿಯಂತ್ರಣದಲ್ಲಿಲ್ಲ ಎಂದು ಹೇಳಿದ್ದಾರೆ. 
ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ನಿನ್ನೆಯಷ್ಟೇ ಕನ್ಹಯ್ಯ ಹಾಗೂ ವಿವಿಯ ಮತ್ತೈವರ ವಿರುದ್ಧ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣ ಸಂಬಂಧ ಹಲವಾರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ವಿವಿ ಉಪ ಕುಲಪತಿ ಜಗದೀಶ್ ಕುಮಾರ್ ಅವರು ವಿದ್ಯಾರ್ಥಿಗಳ ಪರವಾಗಿ ನಿಂತು ಪ್ರಕರಣವನ್ನು ಹಿಂಪಡೆದು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದರು. 

ಇದರಂತೆ ವಿವಿಯ ಪ್ರಾಂಶುಪಾಲರ ನೇತೃತ್ವದಲ್ಲಿ ಜೆಎನ್ ಯು ಅಧಿಕಾರಿಗಳು ನಿನ್ನೆ ಸಭೆಯನ್ನು ನಡೆಸಿದ್ದರು. ಪ್ರಕರಣ ಸಂಬಂಧ ಆರೋಪಗಳು ಎಂದು ಹೇಳಲಾಗುತ್ತಿರುವ ಐವರು ವಿದ್ಯಾರ್ಥಿಗಳನ್ನು ಪೊಲೀಸರ ವಿವಿಗೆ ಬಂದು ಬಂಧಿಸುತ್ತಾರೋ ಅಥವಾ ವಿದ್ಯಾರ್ಥಿಗಳೇ ಶರಣಾಗುವಂತೆ ಸೂಚಿಸುತ್ತಾರೆಂಬುದರ ಕುರಿತಂತೆ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಳ್ಳಲಾಗಿರಲಿಲ್ಲ. 

ಇದರಂತೆ ಮಾತನಾಡಿರುವ ಭುಪಿಂದರ್ ಅವರು, ವಿದ್ಯಾರ್ಥಿಗಳ ಬಂಧನ ಕುರಿತಂತೆ ಪೊಲೀಸರು ಈ ವರೆಗೂ ನಮ್ಮನ್ನು ಸಂಪರ್ಕಿಸಿಲ್ಲ. ಈ ಬಗ್ಗೆ ನಮ್ಮ ಬಳಿ ಅನುಮತಿಯನ್ನು ಕೇಳಿಲ್ಲ. ನಾವು ಕೂಡ ಪೊಲೀಸರ ಈ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT