ಕನ್ಹಯ್ಯ ದೇಶದ್ರೋಹಿ ಎಂದು ಹೇಳಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ: ತನಿಖೆ ಸಂಸ್ಥೆ
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ಪ್ರಕರಣ ಸಂಬಂಧ ಪೊಲೀಸ್ ಬಂಧನದಲ್ಲಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹಿ ಪ್ರಕರಣ ಹೂಡಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಲು ತನಿಖಾ ಸಂಸ್ಥೆ ಹೇಳಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಶ್ವವಿದ್ಯಾಲಯದ ಆವರಣದಲ್ಲಿ ಕನ್ಹಯ್ಯ ಕುಮಾರ್ ಅವರು ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಎಂದು ಬೆರಳು ಮಾಡಿ ತೋರಿಸಲು ಆತನ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಲಭ್ಯವಿದೆ ಎಂದು ಹೇಳಿರುವ ತನಿಖೆ ಸಂಸ್ಥೆಯು ಪ್ರಕರಣ ಸಂಬಂಧ ವಿಶ್ವವಿದ್ಯಾಲಯದ ಉಪಕುಲಪತಿಗಳು ತನಿಖಾ ತಂಡವೊಂದನ್ನು ನೇಮಿಸಿದ್ದರು. ಸಮಿತಿಯ ವರದಿಯ ಪ್ರಕಾರ ಮೇಲ್ನೋಟದಲ್ಲಿ ಕನ್ಹಯ್ಯ ಕುಮಾರ್ ಮತ್ತು ಇನ್ನಿತರೆ 7 ವಿದ್ಯಾರ್ಥಿಗಳು ಅಸಂವಿಧಾನಿಕ ಘೋಷಣೆಗಳನ್ನು ಕೂಗಿದ್ದರು ಎಂದು ತಿಳಿದುಬಂದಿತ್ತು ಎಂದು ಹೇಳಿಕೊಂಡಿದೆ.
ತನಿಖಾ ಸಂಸ್ಥೆಯ ವರದಿ ಪ್ರಕಾರ, ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಏರ್ಪಡಿಸುವುದಕ್ಕೂ ಮುನ್ನು ರಾಜಕೀಯ ಸಭೆಯೊಂದು ನಡೆದಿದ್ದು, ಕಾಲೇಜು ಅಧಿಕಾರಿಗಳು ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲದಿದ್ದರೂ, ವಿರೋಧದ ಮಧ್ಯೆಯೂ ಬಲವಂತವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಂತರ ದೇಶ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳಲಾಗಿದೆ.
ಇದರಂತೆ ಪ್ರಕರಣ ಸಂಬಂಧ ದೆಹಲಿ ತನಿಖಾ ತಂಡ ತನಿಖೆ ನಡೆಸಿದ್ದು, ತನಿಖೆ ವೇಳೆ ಆಂತರಿಕ ವರದಿಯ ಪ್ರಕಾರ, ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ಕನ್ಹಯ್ಯ ಕುಮಾರ್ ಸಬರ್ಮತಿ ಹಾಸ್ಟೆಲ್ ಮತ್ತು ಗಂಗಾ ದಾಭಾದಲ್ಲಿಯೇ ಇದ್ದ ಎಂದು ಹೇಳಲಾಗುತ್ತಿದ್ದು, ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದ. ಅಲ್ಲದೆ, ಕಾಲೇಜಿನ ಭದ್ರತಾ ಸಿಬ್ಬಂದಿಗಳಿಗೆ ಮುಂಗೆ ನಿಂತಿರುವ ವಿದ್ಯಾರ್ಥಿಗಳನ್ನು ತೆರವು ಗೊಳಿಸಿ ಪ್ರತಿಭಟನೆ ಕಾಲ್ನಡಿಗೆಯಲ್ಲಿ ಸಾಗುವಂತೆ ಮಾಡುವಂತೆ ಸೂಚಿಸಿದ್ದ ಎಂದು ಪ್ರತ್ಯಕ್ಷದರ್ಶಿಯೊಬ್ಬ ಮಾಹಿತಿ ನೀಡಿದ್ದಾನೆಂದು ಹೇಳಿಕೊಂಡಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos