ಉಮರ್ ಖಾಲಿದ್ 
ದೇಶ

ಅಫ್ಜಲ್ ಗುರು ಪರ ಘೋಷಣೆ: ತಪ್ಪೊಪ್ಪಿಕೊಂಡ ಉಮರ್ ಖಾಲಿದ್

ದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು) ವಿದ್ಯಾರ್ಥಿ ಉಮರ್....

ನವದೆಹಲಿ: ದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು) ವಿದ್ಯಾರ್ಥಿ ಉಮರ್ ಖಾಲಿದ್ ಉಗ್ರ ಅಫ್ಜಲ್ ಗುರು ಪರ ಘೋಷಣೆ ಕೂಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ನಿನ್ನೆ ತಂಡರಾತ್ರಿ ಪೊಲೀಸರಿಗೆ ಶರಣಾಗಿರುವ ಉಮರ್ ಖಾಲಿದ್ ಹಾಗೂ ಅನಿರ್ಬನ್ ಭಟ್ಟಾಚಾರ್ಯ ಅವರನ್ನು ದೆಹಲಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ಅಫ್ಜಲ್ ಪರ ಘೋಷಣೆ ಕೂಗಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಫೆಬ್ರವರಿ 9ರಂದು ಅಂತಹ ಕಾರ್ಯಕ್ರಮ ಆಯೋಜಿಸಿದ್ದು ಏಕೆ? ಅದಕ್ಕೆ ಹಣ ಎಲ್ಲಿಂದ ಬಂತು ಎಂಬುದು ಸೇರಿದಂತೆ ಹಲವು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ.
ಉಮರ್ ಖಾಲಿದ್ ಸೇರಿದಂತೆ ಐವರು ವಿದ್ಯಾರ್ಥಿಗಳಿಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದ್ದು ದೆಹಲಿ ಹೈಕೋರ್ಟ್, ಪೊಲೀಸರಿಗೆ ಶರಣಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ತಡ ರಾತ್ರಿ ಉಮರ್ ಖಾಲಿದ್ ಹಾಗೂ ಅನಿರ್ಬನ್ ಭಟ್ಯಾಚಾರ್ಯ ಪೊಲೀಸರಿಗೆ ಶರಣಾಗಿದ್ದು. ವಿಚಾರಣೆ ಬಳಿಕ ಇಂದು ಮಧ್ಯಾಹ್ನ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel