ಉಮರ್ ಖಾಲಿದ್ 
ದೇಶ

ಅಫ್ಜಲ್ ಗುರು ಪರ ಘೋಷಣೆ: ತಪ್ಪೊಪ್ಪಿಕೊಂಡ ಉಮರ್ ಖಾಲಿದ್

ದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು) ವಿದ್ಯಾರ್ಥಿ ಉಮರ್....

ನವದೆಹಲಿ: ದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು) ವಿದ್ಯಾರ್ಥಿ ಉಮರ್ ಖಾಲಿದ್ ಉಗ್ರ ಅಫ್ಜಲ್ ಗುರು ಪರ ಘೋಷಣೆ ಕೂಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ನಿನ್ನೆ ತಂಡರಾತ್ರಿ ಪೊಲೀಸರಿಗೆ ಶರಣಾಗಿರುವ ಉಮರ್ ಖಾಲಿದ್ ಹಾಗೂ ಅನಿರ್ಬನ್ ಭಟ್ಟಾಚಾರ್ಯ ಅವರನ್ನು ದೆಹಲಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ಅಫ್ಜಲ್ ಪರ ಘೋಷಣೆ ಕೂಗಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಫೆಬ್ರವರಿ 9ರಂದು ಅಂತಹ ಕಾರ್ಯಕ್ರಮ ಆಯೋಜಿಸಿದ್ದು ಏಕೆ? ಅದಕ್ಕೆ ಹಣ ಎಲ್ಲಿಂದ ಬಂತು ಎಂಬುದು ಸೇರಿದಂತೆ ಹಲವು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ.
ಉಮರ್ ಖಾಲಿದ್ ಸೇರಿದಂತೆ ಐವರು ವಿದ್ಯಾರ್ಥಿಗಳಿಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದ್ದು ದೆಹಲಿ ಹೈಕೋರ್ಟ್, ಪೊಲೀಸರಿಗೆ ಶರಣಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ತಡ ರಾತ್ರಿ ಉಮರ್ ಖಾಲಿದ್ ಹಾಗೂ ಅನಿರ್ಬನ್ ಭಟ್ಯಾಚಾರ್ಯ ಪೊಲೀಸರಿಗೆ ಶರಣಾಗಿದ್ದು. ವಿಚಾರಣೆ ಬಳಿಕ ಇಂದು ಮಧ್ಯಾಹ್ನ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

SCROLL FOR NEXT