ತೆಲಂಗಾಣ ಸಿಎಂಗೆ ಜೀವ ಬೆದರಿಕೆ ಕರೆ 
ದೇಶ

ತೆಲಂಗಾಣ ಸಿಎಂಗೆ ಜೀವ ಬೆದರಿಕೆ ಕರೆ

ತೆಲಂಗಾಣ ರಾಜ್ಯ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಜೀವ ಬೆದರಿಕೆ ಕರೆ ಮಾಡಿರುವುದಾಗಿ ಗುರುವಾರ ತಿಳಿದುಬಂದಿದೆ...

ಕರೀಂನಗರ: ತೆಲಂಗಾಣ ರಾಜ್ಯ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಜೀವ ಬೆದರಿಕೆ ಕರೆ ಮಾಡಿರುವುದಾಗಿ ಗುರುವಾರ ತಿಳಿದುಬಂದಿದೆ.

ಚಂದ್ರಶೇಖರ್ ರಾವ್ ಅವರು ಇನ್ನು ಕೆಲವೇ ದಿನಗಳಲ್ಲಿ ಕರೀಂನಗರಕ್ಕೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿತ್ತು. ಇದರಂತೆ ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಕೊರುಟ್ಲಾದ ಶಾಸಕ ಕಲ್ವಕುಂಟ್ಲಾ ವಿದ್ಯಾಸಾಗರ್ ರಾವ್ ಅವರ ಮೊಬೈಲ್ ಗೆ ಕರೆಯೊಂದು ಬಂದಿದೆ. ಈ ವೇಳೆ ಮಾತನಾಡಿರುವ ಅನಾಮಧೇಯ ವ್ಯಕ್ತಿ ಕರೀಂನಗರಕ್ಕೆ ಮುಖ್ಯಮಂತ್ರಿ ಬಂದಾಗ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

ಇದರಂತೆ ವಿದ್ಯಾಸಾಗರ್ ರಾವ್ ಅವರು ವಿಚಾರವನ್ನು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ. ನಂತರ ಮೆಟ್ಪಲ್ಲಿ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿ, ತಮ್ಮ ಮೊಬೈಲ್ ಫೋನ್ ನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಇದೀಗ ಅನಾಧೇಮಯ ವ್ಯಕ್ತಿ ಮಾಡಿದ ಕರೆಯೊಂದು ಇಂಟರ್ನೆಟ್ ನಿಂದ ಬಂದ ಕರೆಯಾಗಿದೆ ಎಂದು ಹೇಳಲಾಗುತ್ತಿದೆ.  

ಬೆದರಿಕೆ ಕರೆ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಪೊಲೀಸರು ಇದೀಗ ಮೆಟ್ಪಲ್ಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮೆಟ್ಪಲ್ಲಿಯಲ್ಲಿ ಖಾಸಗಿ ಕಾರ್ಯಕ್ರಮವೊಂದನ್ನು ಉದ್ಘಾಟಿಸುವ ಸಲುವಾಗಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಇಂದು ಬೆಳಿಗ್ಗೆ ಆಗಮಿಸಲಿದ್ದಾರೆಂದು ತಿಳಿದುಬಂದಿದೆ. ಕಾರ್ಯಕ್ರಮ ಉದ್ಘಾಟನೆ ನಂತರ ಮುಖ್ಯಮಂತ್ರಿಯವರು ಹೈದರಾಬಾದ್ ಗೆ ತೆರಳಿಲಿದ್ದಾರೆ. ಬೆದರಿಕೆ ಹಾಕಿದ ವ್ಯಕ್ತಿ ಯಾರೆಂಬುದು ಈ ವರೆಗೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT