ಉಗ್ರ ಮಸೂದ್ (ಸಂಗ್ರಹ ಚಿತ್ರ) 
ದೇಶ

ಉಗ್ರ ಮಸೂದ್ ಮೇಲೆ ನಿಷೇಧ; ವಿಶ್ವಸಂಸ್ಥೆ ಮೇಲೆ ಭಾರತ ಒತ್ತಡ

ಪಠಾಣ್ ಕೋಟ್ ದಾಳಿಯ ಪ್ರಮುಖ ರುವಾರಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಮೇಲೆ ನಿಷೇಧ ಹೇರುವಂತೆ ಕೋರಿ ಶೀಘ್ರದಲ್ಲೇ ಭಾರತ ವಿಶ್ವಸಂಸ್ಥೆ ಮೇಲೆ ಒತ್ತಡ ಹೇರಲಿದೆ ಎಂದು ತಿಳಿದುಬಂದಿದೆ...

ನವದೆಹಲಿ: ಪಠಾಣ್ ಕೋಟ್ ದಾಳಿಯ ಪ್ರಮುಖ ರುವಾರಿಯಾಗಿರುವ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಮೇಲೆ ನಿಷೇಧ ಹೇರುವಂತೆ ಕೋರಿ ಶೀಘ್ರದಲ್ಲೇ ಭಾರತ ವಿಶ್ವಸಂಸ್ಥೆ ಮೇಲೆ ಒತ್ತಡ ಹೇರಲಿದೆ ಎಂದು ತಿಳಿದುಬಂದಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, "ಪಠಾಣ್ ಕೋಟ್ ದಾಳಿ ಪ್ರಕರಣ ಕುರಿತಂತೆ ಮಸೂದ್ ಅಜರ್ ಮೇಲೆ ನಿಷೇಧ ಹೇರಿಕೆಗಾಗಿ ಭಾರತ ವಿಶ್ವಸಂಸ್ಥೆಯ ನಿಷೇಧ ಸಮಿತಿಯ ಮೊರೆ ಹೋಗುತ್ತಿದೆ. ದಾಳಿ ಸಂಬಂಧ ಈಗಾಗಲೇ ಸಮಿತಿಗೆ ಪಟ್ಟಿಯೊಂದನ್ನು ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಪಟ್ಟಿಯಲ್ಲಿ ಪಾಕಿಸ್ತಾನಕ್ಕೆ ಸೇರಿದ ವಿವಿಧ ಉಗ್ರ ಸಂಘಟನೆಗಳ 11 ಭಯೋತ್ಪಾದಕರ ಹೆಸರನ್ನು ಸೂಚಿಸಲಾಗಿದೆ. ದಾಳಿ ಸಂಬಂಧ ಪಾಕಿಸ್ತಾನದ ವಿಶೇಷ ತಂಡ ನಡೆಸುತ್ತಿರುವ ತನಿಖೆಯ ವರದಿಗಾಗಿ ಭಾರತ ಕಾಯುತ್ತಿದ್ದು, ವಿದೇಶಾಂಗ ಕಾರ್ಯದರ್ಶಿಗಳು ಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿದ್ದಾರೆ. ಪಾಕಿಸ್ತಾನದ ತನಿಖಾ ವರದಿ ಕೈ ಸೇರಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ವಿಕಾಸ್ ಸ್ವರೂಪ್ ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT