ರಾಜೀವ್ ಗಾಂಧಿ ಹಂತಕಿ ನಳಿನಿ 
ದೇಶ

ರಾಜೀವ್ ಗಾಂಧಿ ಹತ್ಯೆ: ಶೀಘ್ರ ಬಿಡುಗಡೆ ಕೋರಿ ಜಯಲಲಿತಾಗೆ ಮನವಿ ಸಲ್ಲಿಸಿದ ನಳಿನಿ

ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ವಾಸದಲ್ಲಿರುವ ನಳಿನಿ ತನ್ನನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಬುಧವಾರ ಮನವಿಯೊಂದನ್ನು ಸಲ್ಲಿಸಿದ್ದಾರೆಂದು ತಿಳಿದುಬಂದಿದೆ...

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ವಾಸದಲ್ಲಿರುವ ನಳಿನಿ ತನ್ನನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಬುಧವಾರ ಮನವಿಯೊಂದನ್ನು ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ರಾಜೀವ್ ಗಾಂಧಿ ಅವರನ್ನು ಹತ್ಯೆಗೈದ 7 ಹಂತಕರ ಪೈಕಿ ನಳಿನಿ ಶ್ರೀಹರನ್ ಗೆ ನಿನ್ನೆಯಷ್ಟೇ 12 ಗಂಟೆಗಳ ಕಾಲ ಪೆರೋಲ್ ನೀಡಲಾಗಿತ್ತು. ಇದರಂತೆ ತಂದೆ ಶಂಕರ ನಾರಾಯಣನ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು.

ನಂತರ ತಮ್ಮ ಜೈಲುವಾಸ ಕುರಿತಂತೆ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಮನವಿ ಮಾಡಿಕೊಂಡಿರುವ ನಳಿನಿ, ಪ್ರಕರಣ ಸಂಬಂಧ ಈಗಾಗಲೇ ನಾವು 25 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದೇವೆ. ಬಂಧನಕ್ಕೊಳಗಾಗಿರುವ ನಾವು 7 ಮಂದಿ ಮುಗ್ಧರು. ನಮ್ಮ ಕಷ್ಟವನ್ನು ನಿವಾರಿಸಿ. ನಮ್ಮ ಶಿಕ್ಷೆಯನ್ನು ಕಡಿಮೆ ಮಾಡಿ. ನಮಗೆ ಜಯಲಲಿತಾ ಅವರು ಸಹಾಯ ಮಾಡುತ್ತಾರೆಂಬುದರ ಕುರಿತಂತೆ ನಂಬಿಕೆಯಿದೆ ಎಂದು ಹೇಳಿಕೊಂಡಿದ್ದಾರೆ.

ಪ್ರಕರಣ ಸಂಬಂಧ ನಾವು ಮುಗ್ಧರು ಎಂಬುರು ಎಲ್ಲರಿಗೂ ಗೊತ್ತಿದೆ. ನಾವು ಬಂಧಿನಕ್ಕೊಳಗಾದಾಗ ನಮ್ಮ ಕೈಗಳು ರಕ್ತಮಯವಾಗಿರಲಿಲ್ಲ. ರಾಜೀವ್ ಗಾಂಧಿಯವರು ನೋಡಲು ಹೇಗಿರುತ್ತಾರೆಂಬುದೇ ನಮಗೆ ಗೊತ್ತಿರಲಿಲ್ಲ. ನಾವು ಈಗಾಗಲೇ 25 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದು, ನಮ್ಮ ಮನವಿಯನ್ನು ಸ್ವೀಕರಿಸಿ. ನನಗೆ 24 ವರ್ಷದ ಒಬ್ಬಳು ಮಗಳಿದ್ದಾಳೆ. ಕನಿಷ್ಟ ಪಕ್ಷ ನನ್ನ ಮಗಳಿಗಾದರೂ ನಾನು ಹೊರ ಬರಬೇಕು. ನನಗೆ ಮುಖ್ಯಮಂತ್ರಿ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ ಅಫರಾಧಿ ನಳಿನಿಗೆ 1998ರಲ್ಲಿ ಜನವರಿ 28ರಂದು ಮರಣದಂಡನೆ ವಿಧಿಸಲಾಗಿತ್ತು. ಆದರೆ, ತಮಿಳುನಾಡು ರಾಜ್ಯಪಾಲರು 2000ನೇ ಏಪ್ರಿಲ್ 24ರಂದು ಜೀವವಾಧಿ ಶಿಕ್ಷೆಯಾಗಿ ಪರಿವರ್ತಿಸಿ ಆದೇಶ ಹೊರಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT