ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (ಸಂಗ್ರಹ ಚಿತ್ರ) 
ದೇಶ

ನಿರಾಶದಾಯಕ ರೈಲ್ವೆ ಬಜೆಟ್: ನಿತೀಶ್ ಕುಮಾರ್

ಸ್ವಚ್ಛತೆ, ಭದ್ರತೆ ಹಾಗೂ ಸಮಯ ನಿರ್ವಹಣೆಯನ್ನು ಬಿಟ್ಟರೆ ಈ ಬಾರಿಯ ಬಜೆಟ್ ನಿರಾಶೆಯನ್ನುಂಟು ಮಾಡಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೇಳಿದ್ದಾರೆ...

ಪಾಟ್ನಾ: ಸ್ವಚ್ಛತೆ, ಭದ್ರತೆ ಹಾಗೂ ಸಮಯ ನಿರ್ವಹಣೆಯನ್ನು ಬಿಟ್ಟರೆ ಈ ಬಾರಿಯ ಬಜೆಟ್ ನಿರಾಶೆಯನ್ನುಂಟು ಮಾಡಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ.

ರೈಲ್ವೇ ಸಚಿವ ಸುರೇಶ್ ಪ್ರಭು ಅವರು ಇಂದು ಮಂಡಿಸಿದ 2016-17ನೇ ಸಾಲಿನ ರೈಲ್ವೆ ಬಜೆಟ್ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, "ಸುರೇಶ್ ಪ್ರಭು ಅವರು ನನಗೆ ವೈಯಕ್ತಿಕವಾಗಿ ಗೆಳೆಯರಾಗಿದ್ದು, ಅವರಿಗೆ ಶುಭವನ್ನು ಹಾರೈಸುತ್ತೇನೆ. ಆದರೆ, ಈ ಬಾರಿಯ ರೈಲ್ವೆ ಬಜೆಟ್ ನಲ್ಲಿ ಹೊಸದೆಂಬುದು ಯಾವುದು ಇರಲಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆ ಕಂಡಿದ್ದು, ಇದನ್ನು ಗಮನಿಸಿದರೆ ಈ ಬಾರಿ ಪ್ರಯಾಣದ ದರ ಕಡಿಮೆಯಾಗಬೇಕಿತ್ತು. ಆದರೆ, ದರ ಕಡಿಮೆ ಮಾಡದೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲಾಗಿದೆ".

"ಮೀಸಲು ನಿಧಿಯಲ್ಲು ಶೇ.40 ರಷ್ಟು ಆದಾಯ ಕಡಿಮೆಯಾದಂತಿದೆ. ಭದ್ರತೆ ವಿಚಾರದಲ್ಲಿ ಆಕರ್ಷಿತವಾದ ಯಾವುದೇ ಯೋಜನೆಗಳನ್ನು ಕೈಗೊಳ್ಳಲಾಗಿಲ್ಲ. ಮಾಜಿ ಪ್ರಧಾನಮಂತ್ರಿ ವಾಜಪೇಯಿ ಅವರ ಅಧಿಕಾರಾವಧಿಯಲ್ಲಿ ನಾನು ರೈಲ್ವೆ ಸಚಿವನಾಗಿದ್ದಾಗ ಭದ್ರತೆಗಾಗಿ ರು.17 ಸಾವಿರ ಕೋಟಿಯನ್ನು ಮೀಸಲಿರಿಸಲಾಗಿತ್ತು".

"ಈ ಬಾರಿಯ ರೈಲ್ವೆ ಬಜೆಟ್'ನಲ್ಲಿ ಹಿಂದುಳಿದ ಪ್ರದೇಶಗಳನ್ನು ದೂರ ಮಾಡಲಾಗಿದ್ದು, ಬಿಹಾರ ಜನತೆ ಇಂದಿನ ಬಜೆಟ್'ನ್ನು ತಿರಸ್ಕರಿಸುತ್ತದೆ. ನನ್ನ ಅವಧಿಯಲ್ಲಿ ಜನ ಕ್ರಾಂತಿ ಹೊರತರಲಾಗಿತ್ತು. ಇದೀಗ ಪ್ರಭು ಕೂಡ ಅದೇ ಯೋಜನೆಯನ್ನು ಹೊರತಂದಿದ್ದು, ಅಂತ್ಯೋದಯ ಎಕ್ಸ್ ಪ್ರೆಸ್ ಎಂದು ಹೊಸ ಹೆಸರನ್ನು ನೀಡಿದ್ದಾರೆ ಎಂದು ನಿತೀಶ್ ಹೇಳಿದರು.

ಇದೇ ವೇಳೆ ಬಿಜೆಪಿ ಸರ್ಕಾರವನ್ನು ಟೀಕಿಸಿರುವ ನಿತೀಶ್ ಕುಮಾರ್ ಅವರು, ಬಿಜೆಪಿ ಸರ್ಕಾರವು ರೈಲ್ವೆಯಲ್ಲಿ ಖಾಸಗೀಕರಣವನ್ನು ಪ್ರೋತ್ಸಾಹಿಸುವ ಸಲುವಾಗಿ ಮಾರುಕಟ್ಟೆ ಸಾಲ ಮತ್ತು ರೈಲ್ವೆ ಯೋಜನೆಗಳಲ್ಲಿ ಬಂಡವಾಳ ಹೂಡಿಕೆಗಳ ಬಗ್ಗೆ ಮಾತನಾಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT