ಬಾಬಾ ರಾಮ್‌ದೇವ್ 
ದೇಶ

ಪತಂಜಲಿ ಯೋಗಪೀಠಕ್ಕೆ ಮಹಾ ಸರ್ಕಾರದಿಂದ 653 ಎಕರೆ ಭೂಮಿ

ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಯೋಗ ಪೀಠಕ್ಕೆ ಮಹಾರಾಷ್ಟ್ರ ಸರ್ಕಾರ 653 ಎಕರೆ ಭೂಮಿಯನ್ನು ನೀಡಿದೆ. ಪೂರ್ವ ಮಹಾರಾಷ್ಟ್ರದ...

ಮುಂಬೈ: ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಯೋಗ ಪೀಠಕ್ಕೆ ಮಹಾರಾಷ್ಟ್ರ ಸರ್ಕಾರ 653 ಎಕರೆ ಭೂಮಿಯನ್ನು ನೀಡಿದೆ.  ಪೂರ್ವ ಮಹಾರಾಷ್ಟ್ರದ ವಿದರ್ಭಾ ಪ್ರದೇಶದಲ್ಲಿ ನಾಲ್ಕು ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದಕ್ಕಾಗಿ ಈ ಭೂಮಿಯನ್ನು ನೀಡಲಾಗಿದೆ.
ಬಾಬಾ ಅವರಿಗೆ ಭೂಮಿಯನ್ನು ನೀಡುತ್ತಿರುವ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ನಾಗ್ಪುರ್ (ಮಿಹಾನ್)ನಲ್ಲಿರುವ ಮಲ್ಟಿ ಮಾಡೆಲ್ ಇಂಟರ್‌ನ್ಯಾಷನಲ್ ಕಾರ್ಗೋ ಹಬ್ ಮತ್ತು ವಿಮಾನ ನಿಲ್ದಾಣ, ಅಮರಾವತಿ ಮತ್ತು ಕಾಟೋಲ್, ಗಡ್‌ಚಿರೋಲಿಯಲ್ಲಿ ಬಾಬಾ ಅವರಿಗೆ  ಭೂಮಿ ನೀಡಲಾಗಿದೆ ಎಂದಿದ್ದಾರೆ.
ಮಿಹಾನ್‌ನಲ್ಲಿ ಆಹಾರ ಘಟಕ ಸ್ಥಾಪಿಸುವುದಕ್ಕಾಗಿ ಬಾಬಾ ಅವರಿಗೆ 347 ಎಕರೆ ಭೂಮಿಯನ್ನು ಮಹಾರಾಷ್ಟ್ರ ಸರ್ಕಾರ ನೀಡುತ್ತಿದೆ. ಒಂದು ತಿಂಗಳೊಳಗೆ ಬಾಬಾ ಅವರಿಗೆ ಈ ಭೂಮಿಯನ್ನು ಹಸ್ತಾಂತರಿಸಲಾಗುವುದು. ಅಮರಾವತಿಯಲ್ಲಿ ಫುಡ್ ಪಾರ್ಕ್ ನಿರ್ಮಿಸುವುದಕ್ಕಾಗಿ ಭೂಮಿ ನೀಡಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.
ಕಳೆದ ಶುಕ್ರವಾರ ಮಹಾ ಸರ್ಕಾರ ಪತಂಜಲಿ ಗ್ರೂಪ್ ನೊಂದಿಗೆ ಒಡಂಬಡಿಕೆ ಮಾಡಿಕೊಂಡಿತ್ತು. ಈ ಯೋಜನೆಯಲ್ಲಿ ಪತಂಜಲಿ ರು. 2,000 ಕೋಟಿ ಹೂಡಿಕೆ ಮಾಡಲಿದ್ದು,  10,000 ಸ್ಥಳೀಯರಿಗೆ ಉದ್ಯೋಗವಕಾಶಗಳು ಸಿಗಲಿದೆ ಎಂದು ಬಲ್ಲಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!