ಬಾಬಾ ರಾಮ್‌ದೇವ್ 
ದೇಶ

ಪತಂಜಲಿ ಯೋಗಪೀಠಕ್ಕೆ ಮಹಾ ಸರ್ಕಾರದಿಂದ 653 ಎಕರೆ ಭೂಮಿ

ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಯೋಗ ಪೀಠಕ್ಕೆ ಮಹಾರಾಷ್ಟ್ರ ಸರ್ಕಾರ 653 ಎಕರೆ ಭೂಮಿಯನ್ನು ನೀಡಿದೆ. ಪೂರ್ವ ಮಹಾರಾಷ್ಟ್ರದ...

ಮುಂಬೈ: ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಯೋಗ ಪೀಠಕ್ಕೆ ಮಹಾರಾಷ್ಟ್ರ ಸರ್ಕಾರ 653 ಎಕರೆ ಭೂಮಿಯನ್ನು ನೀಡಿದೆ.  ಪೂರ್ವ ಮಹಾರಾಷ್ಟ್ರದ ವಿದರ್ಭಾ ಪ್ರದೇಶದಲ್ಲಿ ನಾಲ್ಕು ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದಕ್ಕಾಗಿ ಈ ಭೂಮಿಯನ್ನು ನೀಡಲಾಗಿದೆ.
ಬಾಬಾ ಅವರಿಗೆ ಭೂಮಿಯನ್ನು ನೀಡುತ್ತಿರುವ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ನಾಗ್ಪುರ್ (ಮಿಹಾನ್)ನಲ್ಲಿರುವ ಮಲ್ಟಿ ಮಾಡೆಲ್ ಇಂಟರ್‌ನ್ಯಾಷನಲ್ ಕಾರ್ಗೋ ಹಬ್ ಮತ್ತು ವಿಮಾನ ನಿಲ್ದಾಣ, ಅಮರಾವತಿ ಮತ್ತು ಕಾಟೋಲ್, ಗಡ್‌ಚಿರೋಲಿಯಲ್ಲಿ ಬಾಬಾ ಅವರಿಗೆ  ಭೂಮಿ ನೀಡಲಾಗಿದೆ ಎಂದಿದ್ದಾರೆ.
ಮಿಹಾನ್‌ನಲ್ಲಿ ಆಹಾರ ಘಟಕ ಸ್ಥಾಪಿಸುವುದಕ್ಕಾಗಿ ಬಾಬಾ ಅವರಿಗೆ 347 ಎಕರೆ ಭೂಮಿಯನ್ನು ಮಹಾರಾಷ್ಟ್ರ ಸರ್ಕಾರ ನೀಡುತ್ತಿದೆ. ಒಂದು ತಿಂಗಳೊಳಗೆ ಬಾಬಾ ಅವರಿಗೆ ಈ ಭೂಮಿಯನ್ನು ಹಸ್ತಾಂತರಿಸಲಾಗುವುದು. ಅಮರಾವತಿಯಲ್ಲಿ ಫುಡ್ ಪಾರ್ಕ್ ನಿರ್ಮಿಸುವುದಕ್ಕಾಗಿ ಭೂಮಿ ನೀಡಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.
ಕಳೆದ ಶುಕ್ರವಾರ ಮಹಾ ಸರ್ಕಾರ ಪತಂಜಲಿ ಗ್ರೂಪ್ ನೊಂದಿಗೆ ಒಡಂಬಡಿಕೆ ಮಾಡಿಕೊಂಡಿತ್ತು. ಈ ಯೋಜನೆಯಲ್ಲಿ ಪತಂಜಲಿ ರು. 2,000 ಕೋಟಿ ಹೂಡಿಕೆ ಮಾಡಲಿದ್ದು,  10,000 ಸ್ಥಳೀಯರಿಗೆ ಉದ್ಯೋಗವಕಾಶಗಳು ಸಿಗಲಿದೆ ಎಂದು ಬಲ್ಲಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT