ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ 
ದೇಶ

ಸಂಸತ್ತು ದಾಳಿಯಲ್ಲಿ ಅಫ್ಜಲ್ ಗುರುವಿನ ಪಾತ್ರದ ಬಗ್ಗೆ ಸಂಶಯವಿದೆ: ಚಿದಂಬರಂ

ಮರಣದಂಡನೆಗೆ ಗುರಿಯಾಗಿದ್ದ ಭಯೋತ್ಪಾದಕ ಅಫ್ಜಲ್ ಗುರುವನ್ನು ಬೆಂಬಲಿಸಿ ಜೆಎನ್ ಯು ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮ ದೇಶಾದ್ಯಂತ...

ನವದೆಹಲಿ: ಮರಣದಂಡನೆಗೆ ಗುರಿಯಾಗಿದ್ದ ಭಯೋತ್ಪಾದಕ ಅಫ್ಜಲ್ ಗುರುವನ್ನು  ಬೆಂಬಲಿಸಿ ಜೆಎನ್ ಯು ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮ ದೇಶಾದ್ಯಂತ ವಿವಾದದ ಬಿರುಗಾಳಿಯನ್ನು ಎಬ್ಬಿಸಿದ್ದು, ಇದೀಗ ಮಾಜಿ ಗೃಹ ಸಚಿವ ಪಿ.ಚಿದಂಬರಂ ಹೇಳಿಕೆಯೊಂದನ್ನು ನೀಡಿ ವಿವಾದಕ್ಕೆ ಕಿಡಿ ಹತ್ತಿಸಿದ್ದಾರೆ. 2001ರ ಸಂಸತ್ತು ದಾಳಿಯಲ್ಲಿ ಅಫ್ಜಲ್ ಗುರುವಿನ ಪಾತ್ರ ಎಷ್ಟರ ಮಟ್ಟಿಗೆ ಇತ್ತು ಎಂಬ ಬಗ್ಗೆ ಸಂಶಯ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಮುಖ ಇಂಗ್ಲಿಷ್ ದೈನಿಕವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು, ಅಫ್ಜಲ್ ಗುರುವಿನ ಕೇಸನ್ನು ಸರಿಯಾಗಿ ನಿಭಾಯಿಸಿಲ್ಲ ಎಂದು ಪ್ರಾಮಾಣಿಕವಾಗಿ ನಾನು ಹೇಳುತ್ತೇನೆ ಎಂದು ಹೇಳಿದ್ದಾರೆ.

''ಆಗ ನಾನು ಸರ್ಕಾರದ ಭಾಗವಾಗಿದ್ದೆ. ಸರ್ಕಾರದಲ್ಲಿದ್ದುಕೊಂಡು ನ್ಯಾಯಾಲಯ ಕೇಸನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಆದರೆ ವೈಯಕ್ತಿಕವಾಗಿ ನನಗೆ ಆ ಕೇಸನ್ನು ನಿಭಾಯಿಸಿದ್ದು ಸರಿಕಾಣಲಿಲ್ಲ. ಚಿದಂಬರಂ ಅವರು ಯುಪಿಎ-2 ಅವಧಿಯಲ್ಲಿ ಗೃಹ ಹಾಗೂ ಹಣಕಾಸು ಖಾತೆಯನ್ನು ವಹಿಸಿದ್ದರು.

ಈಗ ದೆಹಲಿಯ ಜವಹರಲಾಲ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಅಫ್ಜಲ್ ಗುರುವಿನ ಪರ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಐವರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಿರುವುದು ಎಲ್ಲವನ್ನೂ ನೋಡಿದಾಗ, ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹದ ಕೇಸು ದಾಖಲಿಸುವುದು ಕೂಡ ತಪ್ಪಾಗುತ್ತದೆ. ಎಂದರು.

ಜೆಎನ್ ಯು ವಿವಾದ ದೇಶವನ್ನು ಇಬ್ಭಾಗ ಮಾಡಿದ್ದು, ಕೆಲವರು ಬಂಧಿತಗೊಂಡಿರುವ ಐವರು ವಿದ್ಯಾರ್ಥಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದರೆ, ಇನ್ನು ಹಲವರು ವಿದ್ಯಾರ್ಥಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

2001ರ ಸಂಸತ್ತು ದಾಳಿಗೆ ಸಂಬಂಧಪಟ್ಟಂತೆ ಅಫ್ಜಲ್ ಗುರುವಿಗೆ ಮರಣದಂಡನೆ ಶಿಕ್ಷೆ ನೀಡಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಸಂಸತ್ತು ದಾಳಿಯಲ್ಲಿ ಆರು ಮಂದಿ ಪೊಲೀಸ್ ಅಧಿಕಾರಿಗಳು, ಇಬ್ಬರು ಸಂಸತ್ತು ಭದ್ರತಾ ಸಿಬ್ಬಂದಿ ಮತ್ತು 5 ಮಂದಿ ಜೈಶ್-ಇ-ಮೊಹಮ್ಮದ್ ಉಗ್ರರು ಸಾವನ್ನಪ್ಪಿದ್ದರು. ಅಫ್ಜಲ್ ಗುರುವನ್ನು ಫೆಬ್ರವರಿ 9, 2013ರಲ್ಲಿ ಮರಣದಂಡನೆಗೆ ಗುರಿಪಡಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT