ನಿವೃತ್ತ ಪ್ರಾಧ್ಯಾಪಕ ಚಮನ್ ಲಾಲ್ 
ದೇಶ

ಜೆಎನ್ ಯು ವಿವಾದ: ಪ್ರಶಸ್ತಿ ವಾಪಸ್ ನೀಡಲಿರುವ ನಿವೃತ್ತ ಪ್ರಾಧ್ಯಾಪಕ ಚಮನ್ ಲಾಲ್

ಜೆಎನ್ ಯು ನಿವೃತ್ತ ಪ್ರಾಧ್ಯಾಪಕ ಚಮನ್ ಲಾಲ್ ಈಗ ಮಾನವ ಸಂಪನ್ಮೂಲ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಮತ್ತೊಂದು ಪ್ರಶಸ್ತಿಯನ್ನು ಇಲಾಖೆಗೆ ವಾಪಸ್ ನೀಡಲು ನಿರ್ಧರಿಸಿದ್ದಾರೆ.

ನವದೆಹಲಿ: ಅಸಹಿಷ್ಣುತೆಯನ್ನು ವಿರೋಧಿಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ವಾಪಸ್ ನೀಡಿದ್ದ ಜೆಎನ್ ಯು ನಿವೃತ್ತ ಪ್ರಾಧ್ಯಾಪಕ ಚಮನ್ ಲಾಲ್ ಈಗ ಮಾನವ ಸಂಪನ್ಮೂಲ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಮತ್ತೊಂದು ಪ್ರಶಸ್ತಿಯನ್ನು ಇಲಾಖೆಗೆ ವಾಪಸ್ ನೀಡಲು ನಿರ್ಧರಿಸಿದ್ದಾರೆ.
ಜೆಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ಜೆಎನ್ ಯು ಸಿಬ್ಬಂದಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಿರುವ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಹಾಗೂ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಲು ಪ್ರಶಸ್ತಿ ವಾಪಸ್ ನೀಡುತ್ತಿರುವುದಾಗಿ ಚಮನ್ ಲಾಲ್ ತಿಳಿಸಿದ್ದಾರೆ. ಹಿಂದಿ ನಿರ್ದೇಶನಾಲಯದಿಂದ ಕೊದಮಾಡಲಾಗಿದ್ದ ಪ್ರಶಸ್ತಿ ಫಲಕ ಹಾಗೂ 50,000 ರೂಪಾಯಿಯನ್ನೊಳಗೊಂಡ ಪ್ರಶಸ್ತಿಯನ್ನು ವಾಪಸ್ ನೀಡಲು ತೀರ್ಮಾನಿಸಿದ್ದೇನೆ ಎಂದು ಜೆಎನ್ ಯು ವಿವಿ ಕುಲಪತಿಗೆ ಜಗದೀಶ್ ಕುಮಾರ್ ಪತ್ರ ಬರೆದಿದ್ದಾರೆ.    
ಕಳೆದ ವರ್ಷ ಅಸಹಿಷ್ಣುತೆ ವಿರುದ್ಧ ಧ್ವನಿ ಎತ್ತಿ ಪ್ರಶಸ್ತಿ ವಾಪಸ್ ಚಳುವಳಿಯಲ್ಲಿ ಭಾಗಿಯಾಗಿದ್ದ ಚಮನ್ ಲಾಲ್ ಈಗ ಮಾನವ ಸಂಪನ್ಮೂಲ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪ್ರಶಸ್ತಿಯನ್ನು ವಾಪಸ್ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT