ಬಿಜೆಪಿಯೇತರ ರಾಜ್ಯಕ್ಕೆ ಕನ್ಹಯ್ಯ ಪ್ರಕರಣ ವರ್ಗಾಯಿಸಿ: ಕಾಂಗ್ರೆಸ್ 
ದೇಶ

ಬಿಜೆಪಿಯೇತರ ರಾಜ್ಯಕ್ಕೆ ಕನ್ಹಯ್ಯ ಪ್ರಕರಣ ವರ್ಗಾಯಿಸಿ: ಕಾಂಗ್ರೆಸ್

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ವಿವಾದಕ್ಕೆ ಸಂಬಂಧಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಕನ್ಹಯ್ಯ ಕುಮಾರ್ ಪ್ರಕರಣವನ್ನು ಬಿಜೆಪಿಯೇತರ ರಾಜ್ಯಕ್ಕೆ ವರ್ಗಾಯಿಸುವಂತೆ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ...

ಲಖನೌ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ವಿವಾದಕ್ಕೆ ಸಂಬಂಧಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಕನ್ಹಯ್ಯ ಕುಮಾರ್ ಪ್ರಕರಣವನ್ನು ಬಿಜೆಪಿಯೇತರ ರಾಜ್ಯಕ್ಕೆ ವರ್ಗಾಯಿಸುವಂತೆ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ಅವರು, ಕನ್ಹಯ್ಯ ಪ್ರಕರಣ ಸಂಬಂಧ ದೆಹಲಿ ಪೊಲೀಸರು ನಡೆದುಕೊಳ್ಳುತ್ತಿರುವ ರೀತಿ ನಿಜಕ್ಕೂ ಅವಮಾನವಾದದ್ದು ಹಾಗೂ ದುರದೃಷ್ಟಕರವಾದದ್ದು. ಕನ್ಹಯ್ಯ ಪ್ರಕರಣವನ್ನ ಬಿಜೆಪಿಯೇತರ ಸರ್ಕಾರವಾಗಿರುವ ಉತ್ತರಪ್ರದೇಶ ಅಥವಾ ಬಿಹಾರಕ್ಕೆ ವರ್ಗಾಯಿಸಿ. ಇದರಿಂದ ಆತನಿಗೆ ಜಾಮೀನು ಸಿಗುತ್ತದೆ ಹಾಗೂ ಪ್ರಕರಣ ಸಂಬಂಧವಿರುವ ಸತ್ಯಾಸತ್ಯತೆಗಳು ಹೊರಬರುತ್ತದೆ ಎಂದು ಹೇಳಿದ್ದಾರೆ.

ಕನ್ಹಯ್ಯ ಕುಮಾರ್ ದೇಶ ವಿರೋಧ ಘೋಷಣೆಗಳನ್ನು ಕೂಗಿದ್ದಾನೆಂದು ಸುಳ್ಳು ಆರೋಪಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ, ಇದೀಗ ದಾಖಲೆಗಳಿಂದ ಆತನ ವಿರುದ್ಧ ತಪ್ಪು ಆರೋಪಗಳನ್ನು ಮಾಡಿರುವುದು ಬಹಿರಂಗವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT