ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಇನ್ನೂ ಪತ್ತೆಯಾಗದ ಶಾಸಕ 
ದೇಶ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಇನ್ನೂ ಪತ್ತೆಯಾಗದ ಶಾಸಕ

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಎದುರಿಸುತ್ತಿರುವ ಆರ್ ಜೆಡಿ ಶಾಸಕ ರಾಜ್ ಬಲ್ಲಭ್ ಯಾದವ್ ಇನ್ನೂ ತಲೆಮರೆಸಿಕೊಂಡಿದ್ದು, ಬಿಹಾರ ಪೊಲೀಸರು ಭಾನುವಾರ ಶಾಸಕನ ಆಸ್ತಿಗೆ ಮುಟ್ಟುಗೋಲು ಹಾಕಿರುವುದಾಗಿ ತಿಳಿದುಬಂದಿದೆ...

ಪಾಟ್ನ; ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಎದುರಿಸುತ್ತಿರುವ ಆರ್ ಜೆಡಿ ಶಾಸಕ ರಾಜ್ ಬಲ್ಲಭ್ ಯಾದವ್ ಇನ್ನೂ ತಲೆಮರೆಸಿಕೊಂಡಿದ್ದು, ಬಿಹಾರ ಪೊಲೀಸರು ಭಾನುವಾರ ಶಾಸಕನ ಆಸ್ತಿಗೆ ಮುಟ್ಟುಗೋಲು ಹಾಕಿರುವುದಾಗಿ ತಿಳಿದುಬಂದಿದೆ.

150ಕ್ಕೂ ಹೆಚ್ಚು ಪೊಲೀಸರು ಇದೀಗ ಯಾದವ್ ನಿವಾಸದ ಬಳಿ ಬೀಡು ಬಿಟ್ಟಿದ್ದು, ಶಾಸಕನಿಗೆ ಸಂಬಂಧಪಟ್ಟ ಆಸ್ತಿಗೂ ಮುಟ್ಟುಗೋಲು ಹಾಕಿದ್ದಾರೆ. ಅಲ್ಲದೆ, ಆರ್ ಜೆಡಿ ಪಕ್ಷ ಚಿಹ್ನೆಗಳನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಅತ್ಯಾಚಾರ ಪ್ರಕರಣವನ್ನು ನಿನ್ನೆ ವಿಚಾರಣೆ ನಡೆಸಿದ್ದ ಪಾಟ್ನ ನ್ಯಾಯಾಲಯವು ತಲೆಮರೆಸಿಕೊಂಡಿರುವ ಶಾಸಕನ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಸೂಚನೆ ನೀಡಿತ್ತು. ನ್ಯಾಯಾಲಯದ ಆದೇಶವನ್ನು ಪರಿಪಾಲಿಸಿರುವ ಪೊಲೀಸರು ಇದೀಗ ಶಾಸಕನ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಫೆ.6 ರಂದು ಹುಟ್ಟುಹಬ್ಬದ ಆಚರಣೆಯಿಂದೆ ಎಂದು ಹೇಳಿ ಸುಲೇಖ ದೇವಿ ಎಂಬ ಮಹಿಳೆಯ ಬಾಲಕಿಯೊಬ್ಬಳನ್ನು ಆರ್ ಜೆಡಿ ಶಾಸಕ ಬಲ್ಲಭ್ ಯಾದವ್ ಅವರ ನಿವಾಕಕ್ಕೆ ಕರೆದುಕೊಂಡು ಹೋಗಿದ್ದಾಳೆ. ಈ ವೇಳೆ ಬಾಲಕಿಯನ್ನು ಶಾಸಕನೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯಿಸಿದ್ದಾಳು. ವಿಚಾರ ತಿಳಿದ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆಸಿದ್ದರು. ಇಲ್ಲದೆ, ಪ್ರಕರಣ ಸಂಬಂಧ ಬಾಲಕಿಯ ಕುಟುಂಬದ ನಾಲ್ವರು ಸದಸ್ಯರನ್ನು ಬಂಧಿಸಿದ್ದರು. ನಂತರ ಶಾಸಕ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಆರೋಪಗಳು ಕೇಳಿಬಂದಿದ್ದವು. ಇದೀಗ ಪ್ರಕರಣ ಸಂಬಂಧ ಶಾಸಕ ತಲೆ ಮರೆಸಿಕೊಂಡಿದ್ದು, ಶಾಸಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT