ದುರ್ಗೆ ಬಗ್ಗೆ ಒಂದು ಪದವನ್ನು ಮಾತನಾಡಿಲ್ಲ; ಸೀತಾರಾಮ್ ಯೆಚೂರಿ 
ದೇಶ

ದುರ್ಗೆ ಬಗ್ಗೆ ಒಂದು ಪದವನ್ನು ಮಾತನಾಡಿಲ್ಲ; ಸೀತಾರಾಮ್ ಯೆಚೂರಿ

ರಾಜ್ಯಸಭೆಯಲ್ಲಿ ನಾನು ದುರ್ಗೆ ಬಗ್ಗೆ ಮಾತನಾಡಿಲ್ಲ. ನನ್ನ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಅಸಂಬದ್ಧವಾದದ್ದು ಎಂದು ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಅವರು ಹೇಳಿದ್ದಾರೆ...

ನವದೆಹಲಿ: ರಾಜ್ಯಸಭೆಯಲ್ಲಿ ನಾನು ದುರ್ಗೆ ಬಗ್ಗೆ ಮಾತನಾಡಿಲ್ಲ. ನನ್ನ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಅಸಂಬದ್ಧವಾದದ್ದು ಎಂದು ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಅವರು ಹೇಳಿದ್ದಾರೆ.

ಸೀತಾರಾಮ್ ಯೆಚೂರಿಯವರು ಈ ಹಿಂದೆ ರಾಜ್ಯಸಭೆಯಲ್ಲಿ ದುರ್ಗೆಗೆ ವಿರುದ್ಧವಾಗಿ ಮಾತನಾಡಿದ್ದಾರೆಂದು ಹೇಳಿ ಹಲವು ಬೆದರಿಕೆ ಕರೆಗಳು ಬಂದಿರುವುದಾಗಿ ಹೇಳಲಾಗುತ್ತಿತ್ತು. ಇದೀಗ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪ ಹಾಗೂ ಬೆದರಿಕೆ ಕರೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನನಗೆ ಹಲವು ಬೆದರಿಕೆ ಕರೆ ಹಾಗೂ ಬೆದರಿಕೆ ಸಂದೇಶಗಳು ಬರುತ್ತಿವೆ. ರಾಜ್ಯಸಭೆಯಲ್ಲಿ ನಾನು ದುರ್ಗೆ ಬಗ್ಗೆ ಮಾತನಾಡಿಲ್ಲ. ಇದು ನಿಜಕ್ಕೂ ಅಸಂಬದ್ಧವಾದದ್ದು. ದುರ್ಗೆ ಹೆಸರು ಕೂಡ ನನ್ನ ಬಾಯಲ್ಲಿ ಬರಲಿಲ್ಲ. ಬೇಕಿದ್ದರೆ ಯೂಟ್ಯೂಬ್ ನಲ್ಲಿ ನನ್ನ ಹೇಳಿಕೆಗಳಿವೆ ನೋಡಿ. ನನ್ನ ವಿರುದ್ಧ ಅಪಪ್ರಚಾರ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಈ ವರೆಗೂ 1000ಕ್ಕೂ ಹೆಚ್ಚು ಕರೆಗಳು ಹಾಗೂ 500 ಕ್ಕೂ ಹೆಚ್ಚು ಸಂದೇಶಗಳು ನನ್ನ ಮೊಬೈಲ್ ಸಂಖ್ಯೆಗೆ ಬಂದಿವೆ. ಈ ರೀತಿಯಾಗಿ ಬೆದರಿಕೆ ಹಾಕಿದರೆ ಯಾವುದೇ ಪ್ರಯೋಜನವಿಲ್ಲ. ಪೊಲೀಸರಿಗೆ ಈಗಾಗಲೇ ನಮ್ಮ ಕಚೇರಿ ದೂರು ನೀಡಿದ್ದು, ಬೆದರಿಕೆ ಕರೆ ಬಂದ ಸಂಖ್ಯೆಗಳು ಹಾಗೂ ಸಂದೇಶ ಬಂದ ಸಂಖ್ಯೆಗಳನ್ನು ಪೊಲೀಸರಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT