ಜಯಲಲಿತಾ 
ದೇಶ

ಜಯಲಲಿತಾಗಾಗಿ ದೇವಾಲಯ ನಿರ್ಮಿಸಲು ಮುಂದಾದ 'ಅಮ್ಮಾ' ಅಭಿಮಾನಿಗಳು

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಬೆಂಬಲಿಗರು ವೆಲ್ಲೂರು ಬಳಿ ಅಮ್ಮಾ ಆಲಯ ನಿರ್ಮಿಸಲು ಮುಂದಾಗಿದ್ದಾರೆ....

ಚೆನ್ನೈ: ತಮಿಳುನಾಡು  ಮುಖ್ಯಮಂತ್ರಿ ಜಯಲಲಿತಾ ಬೆಂಬಲಿಗರು ವೆಲ್ಲೂರು ಬಳಿ ಅಮ್ಮಾ ಆಲಯ ನಿರ್ಮಿಸಲು ಮುಂದಾಗಿದ್ದಾರೆ.

ವಿರುಗುಂಬಾಕಂ ವಿಧಾನಸಭಾ ಕ್ಷೇತ್ರದ ಎಂಜಿಆರ್ ಯುವ ವಿಭಾಗದ ಜಂಟಿ ಕಾರ್ಯದರ್ಶಿಯಾದ 37 ವರ್ಷ ವಯಸ್ಸಿನ ಎ.ಪಿ.ಶ್ರೀನಿವಾಸನ್, ಮುಖ್ಯಮಂತ್ರಿ ಜಯಲಲಿತಾ ಅವರ ದೇವಾಲಯ "ಅಮ್ಮಾ ದೇವಾಲಯ" ನಿರ್ಮಿಸಲು ಉತ್ಸುಕರಾಗಿದ್ದಾರೆ.  

ವೆಲ್ಲೂರ್‌ನಿಂದ 60 ಕಿ.ಮೀ ದೂರದಲ್ಲಿರುವ ಐಯಪ್ಪೆಡು ಗ್ರಾಮದಲ್ಲಿ ಶ್ರೀನಿವಾಸನ್ ಮಾಲೀಕತ್ವದ 1200 ಚದುರ ಅಡಿ ಭೂಮಿಯಲ್ಲಿ ದೇವಾಲಯ ನಿರ್ಮಾಣವಾಗಲಿದ್ದು, 50 ಲಕ್ಷ ರೂಪಾಯಿಗಳು ವೆಚ್ಚವಾಗಲಿವೆ. ದೇವಾಲಯ ನಿರ್ಮಿಸಲು ನಿನ್ನೆ ಭೂಮಿ ಪೂಜೆ ನೆರವೇರಿಸಲಾಗಿದೆ.

ಅಮ್ಮಾ ಆಲಯಂ ದೇವಾಲಯದಲ್ಲಿ ಜಯಲಲಿತಾರ ಆರು ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳ್ಳಲಿದ್ದು, ದೇವಾಲಯದ ಎಲ್ಲಾ ಬದಿಗಳಲ್ಲಿ ಅವರ ಜೀವನ ಮತ್ತು ಸಾಧನೆಗಳನ್ನು ಬರೆಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಮ್ಮಾ ದೇವಾಲಯದ ಹೊರ ಆವರಣದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿ.ಎನ್. ಅಣ್ಣಾ ದೊರೈ ಮತ್ತು ಎಂ.ಜಿ.ರಾಮಚಂದ್ರನ್ ಅವರ ಪ್ರತಿಮೆ ಪ್ರತಿಷ್ಠಾಪಿಸಲಾಗುವುದು.

ಅಮ್ಮಾ ದೇವಾಲಯ ನಿರ್ಮಾಣಕ್ಕೆ ಅಗತ್ಯವಾದ ಹಣವನ್ನು ತಮ್ಮ ಕುಟುಂಬದ ಸದಸ್ಯರಿಂದ ಮತ್ತು ಅಮ್ಮಾ ಭಕ್ತರಿಂದ ದೇಣಿಗೆ ಸಂಗ್ರಹಿಸಿ ನಿರ್ಮಾಣ ಮಾಡಲಾಗುವುದು ಎಂದು ಶ್ರೀನಿವಾಸನ್ ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ