ಸಿಂಧು ಸೂರ್ಯಕುಮಾರ್ 
ದೇಶ

ಮಹಿಷಾಸುರ ಜಯಂತಿ ಕುರಿತ ಚರ್ಚಾ ಕಾರ್ಯಕ್ರಮದ ನಿರೂಪಕಿಗೆ 1000 ಬೆದರಿಕೆ ಕರೆ

ಮಹಿಷಾಸುರ ಜಯಂತಿ ಆಚರಣೆ ಕುರಿತು ಕಾರ್ಯಕ್ರಮವೊಂದನ್ನು ಸಮನ್ವಯ ಮಾಡಿದ್ದ ಏಶಿಯ ನೆಟ್ ನ್ಯೂಸ್ ನ ಮುಖ್ಯ ಸಂಯೋಜನಾ ಸಂಪಾದಕಿ ಸಿಂಧು...

ತಿರುವನಂತಪುರಂ: ಮಹಿಷಾಸುರ ಜಯಂತಿ ಆಚರಣೆ ಕುರಿತು ಕಾರ್ಯಕ್ರಮವೊಂದನ್ನು ಸಮನ್ವಯ ಮಾಡಿದ್ದ ಏಶಿಯ ನೆಟ್ ನ್ಯೂಸ್ ನ ಮುಖ್ಯ ಸಂಯೋಜನಾ ಸಂಪಾದಕಿ ಸಿಂಧು ಸೂರ್ಯಕುಮಾರ್ ಅವರಿಗೆ ಬೆದರಿಗೆ ಕರೆಗಳು ಬಂದಿವೆ.

ಅದು ಒಂದಲ್ಲ ಎರಡಲ್ಲ ಸಾವಿರಾರು ಬೆದರಿಕೆ ಕರೆಗಳು ಬಂದಿದ್ದು, ಐಜಿ ಮನೋಜ್ ಅಬ್ರಹಾಂ ನೇತೃತ್ವದಲ್ಲಿ ತನಿಖಾ ತಂಡವನ್ನು ಕೇರಳ ಸರ್ಕಾರ ರಚಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಕಾರ್ಯಕ್ರಮ ಕುರಿತಂತೆ ಕೆರಳಿದ ಸಂಘ ಪರಿವಾರದ ಬೆಂಬಲಿಗರು ಅವರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ವಿದೇಶಗಳಿಂದಲೂ ಇಂತಹ ಕರೆಗಳು ಬಂದಿವೆ ಎಂದು ದಿ ನ್ಯೂಸ್ ಮಿನಿಟ್ ವೆಬ್ ಸೈಟ್ ವರದಿ ಮಾಡಿದೆ.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಅಂತೋ ಅಂಟನಿ, ಸಿಪಿಎಂ ಸಂಸದ ಎಂಬಿ ರಾಜೇಶ್ ಹಾಗೂ ಬಿಜೆಪಿ ವಕ್ತಾರ ವಿವಿ ರಾಜೇಶ್ ಅವರು ಭಾಗವಹಿಸಿದ್ದು ಈ ಕಾರ್ಯಕ್ರಮದಲ್ಲಿ ಸಿಂಧು ಅವರಿಗೆ ಪ್ರಶ್ನೆಗಳನ್ನು ಕೇಳಿದ್ದರು. ಆದರೆ ಸಿಂಧು ದುರ್ಗೆಯನ್ನು ಲೈಂಗಿಕ ಕಾರ್ಯಕರ್ತೆ ಎಂದು ಹೇಳಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ವಂದತಿ ಹರಡಿದ ಕಿಡಿಗೇಡಿಗಳು ಫೇಸ್ ಬುಕ್ ಹಾಗೂ ವಾಟ್ಸ್ ಆಪ್ ಗಳಲ್ಲಿ ಈ ಕುರಿತು ಸಿಂಧುವನ್ನು ಪ್ರಶ್ನಿಸುವಂತೆ ಆಕೆಯ ಮೊಬೈಲ್ ನಂಬರನ್ನೂ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT