ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 
ದೇಶ

ಉನ್ನತ ಶಿಕ್ಷಣಕ್ಕೆ ಹಣಕಾಸು ನೆರವು ಒದಗಿಸಲು ಹಣಕಾಸು ಸಂಸ್ಥೆಗಳ ಸ್ಥಾಪನೆ

ಕೇಂದ್ರ ಸರ್ಕಾರ ಈ ಬಾರಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ...

ನವದೆಹಲಿ: ಕೇಂದ್ರ ಸರ್ಕಾರ ಈ ಬಾರಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ. ಅದಕ್ಕಾಗಿ  ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಪ್ರಕಟಿಸಿದೆ.

ಐಐಟಿಯಂಥ ಉನ್ನತ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರವು ಸಾವಿರ ಕೋಟಿ ರೂಪಾಯಿ ಮೂಲ ಬಂಡವಾಳದೊಂದಿಗೆ ಉನ್ನತ ಶಿಕ್ಷಣ ಸಾಲ ವಿತರಣಾ ಸಂಸ್ಥೆ (ಎಚ್‌ಇಎಫ್ಎ) ರಚನೆಗೆ ಸರ್ಕಾರ ನಿರ್ಣಯಿಸಿದೆ.

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ 62 ನವೋದಯ ವಿದ್ಯಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುತ್ತಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ನವೋದಯ ವಿದ್ಯಾಲಯಗಳಿಲ್ಲವೋ ಅಲ್ಲೆಲ್ಲ ಇನ್ನೆರಡು ವರ್ಷಗಳಲ್ಲಿ ಸ್ಥಾಪಿಸಲಾಗುತ್ತದೆ.

ಸರ್ವಶಿಕ್ಷಣ ಅಭಿಯಾನಕ್ಕೆ ಹಂಚಿಕೆಯಾಗುವ ಮೊತ್ತವನ್ನೂ ಹೆಚ್ಚಿಸುವುದಾಗಿ ಬಜೆಟ್‌ನಲ್ಲಿ ವಿತ್ತ ಸಚಿವರು ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ತಮ್ಮ ಅಂಕಪಟ್ಟಿ, ಡಿಗ್ರಿ ಸರ್ಟಿಫಿಕೇಟು, ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲು 'ಡಿಜಿಟಲ್‌ ಡಿಪಾಸಿಟರಿ' ಸ್ಥಾಪಿಸುವುದಾಗಿ ಅರುಣ್‌ ಜೇಟ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT