ವಿದ್ಯುತ್ 
ದೇಶ

ನಗರಗಳಿಗಿಲ್ಲ ಲೋಡ್ ಶೆಡ್ಡಿಂಗ್! ರೈತರಿಗೆ ತ್ರೀಫೇಸ್ ವಿದ್ಯುತ್ ಪವರ್ ಕಟ್ ಇಲ್ಲ

ರಾಜ್ಯದ ಎಲ್ಲಾ ನಗರ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ರದ್ದು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಜತೆಗೆ ರೈತರ ಪಂಪ್‍ಸೆಟ್‍ಗಳಿಗೆ ನಿತ್ಯ 6 ರಿಂದ 7...

ಬೆಂಗಳೂರು: ರಾಜ್ಯದ ಎಲ್ಲಾ ನಗರ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ರದ್ದು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಜತೆಗೆ ರೈತರ ಪಂಪ್‍ಸೆಟ್‍ಗಳಿಗೆ ನಿತ್ಯ 6 ರಿಂದ 7 ಗಂಟೆಗಳ ತ್ರಿಫೇಸ್ ವಿದ್ಯುತ್ ಪೂರೈಸಲು ತೀರ್ಮಾನಿಸಿದೆ. ರಾಜ್ಯದಲ್ಲಿ ನಿತ್ಯ 9800 ಮೆಗಾವ್ಯಾಟ್ ವಿದ್ಯುತ್‍ಗೆ ಬೇಡಿಕೆ ಇದ್ದು, ಸದ್ಯ 8400 ಮೆ.ವ್ಯಾ ಲಭ್ಯವಿದೆ. 1400 ಮೆ.ವ್ಯಾ ಕೊರತೆಯಿರುವುದರಿಂದ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿಯಾಗಿತ್ತು.

ಆದರೆ ಶುಕ್ರವಾರದಿಂದ (ಜನವರಿ 1) ದಾಮೋದರ ಕಣಿವೆಯಿಂದ ಸದ್ಯಕ್ಕೆ 168 ಮೆ.ವ್ಯಾ. ಹಾಗೂ ಏಪ್ರಿಲ್‍ನಿಂದ 300 ಮೆ.ವ್ಯಾ ಪೂರೈಕೆಯಾಗಲಿದೆ. ತಮಿಳುನಾಡಿನ ಕೂಡನ್‍ಕುಳಂನಿಂದ ಜ.15ರಿಂದ 221 ಮೆ.ವ್ಯಾ ಪೂರೈಕೆಯಾಗಲಿದೆ. ಜನವರಿ ಅಂತ್ಯಕ್ಕೆ ಬಳ್ಳಾರಿ ಥರ್ಮಲ್ ಘಟಕ3, ಯರಮರಸ್ ಘಟಕ1ರಿಂದ ತಲಾ 700 ಮೆ.ವ್ಯಾ ವಿದ್ಯುತ್ ಗ್ರಿಡ್‍ಗೆ ಸೇರ್ಪಡೆಗೊಳ್ಳಲಿದೆ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಹೇಳಿದರು.

'ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದರಿಂದ ಜಲಾಶಯಗಳು ಶೇ.50ರಷ್ಟು ಮಾತ್ರ ಭರ್ತಿಯಾಗಿದ್ದವು. ಬೇಸಿಗೆಯಲ್ಲಿ ವಿದ್ಯುತ್ ಹೆಚ್ಚು ಅವಶ್ಯವಿರುವ ಕಾರಣದಿಂದ ಆಗ ವಿದ್ಯುತ್ ಉತ್ಪಾದಿಸದೆ ನೀರನ್ನು ಉಳಿಸಿ ಕೊಳ್ಳಲಾಗಿತ್ತು. ಶುಕ್ರವಾರದಿಂದ (ಜ.1) ಪ್ರತಿ ದಿನ 1 ಸಾವಿರ ಮೆ.ವ್ಯಾ ಜಲವಿದ್ಯುತ್ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲಾಗುತ್ತದೆ. ಹೀಗಾಗಿ ಲೋಡ್ ಶೆಡ್ಡಿಂಗ್ ರದ್ದು ಮಾಡಲಾಗಿದ್ದು, ರೈತರ ಪಂಪ್‍ಸೆಟ್‍ಗಳಿಗೆ 6ರಿಂದ 7 ಗಂಟೆಗಳ ವಿದ್ಯುತ್ ಪೂರೈಸಲು ನಿರ್ಧರಿಸಿದ್ದೇವೆ,'' ಎಂದು ವಿವರಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಲ್‍ಇಡಿ ಬಲ್ಬ್ ಯೋಜನೆ ಯಶಸ್ವಿಯಾಗಿದ್ದು, ಮೈಸೂರಿನ 1.5ಲಕ್ಷ ಬಲ್ಬ್‍ಗಳನ್ನು ಗ್ರಾಹಕರು ಖರೀದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT