ದೆಹಲಿ ರೈಲು ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ (ಸಂಗ್ರಹ ಚಿತ್ರ) 
ದೇಶ

ಹುಸಿ ಬಾಂಬ್‌ ಬೆದರಿಕೆ: ದೆಹಲಿಯಲ್ಲಿ ರೈಲು ಸಂಚಾರ ವಿಳಂಬ

ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಬಾಂಬ್ ಬೆದರಿಕೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ರೈಲು ಸಂಚಾರ ವಿಳಂಬವಾಯಿತು...

ನವದೆಹಲಿ: ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಬಾಂಬ್ ಬೆದರಿಕೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ರೈಲು ಸಂಚಾರ ವಿಳಂಬವಾಯಿತು.

ದೆಹಲಿ ಪೊಲೀಸರಿಗೆ ದೆಹಲಿ-ಕಾನ್ಪುರ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್‌ ಬಂದ ಹಿನ್ನಲೆಯಲ್ಲಿ ಕೆಲಕಾಲ ರೈಲುಗಳ ಸಂಚಾರವನ್ನು  ಸ್ಥಗಿತಗೊಳಿಸಲಾಗಿತ್ತು. ಪ್ರಮುಖವಾಗಿ ದೆಹಲಿ-ಕಾನ್ಪುರ ರೈಲನ್ನು ತೀವ್ರ ತಪಾಸಣೆ ಮಾಡಿದರು. ಆದರೆ ಪರಿಶೀಲನೆ ವೇಳೆ ಯಾವುದೇ ಸ್ಫೋಟಕಗಳು ಕಂಡು ಬಂದಿಲ್ಲ.  ಬಳಿಕ ಇದೊಂದು  ಹುಸಿ ಬಾಂಬ್ ಬೆದರಿಕೆ ಎಂದು ತಿಳಿದ ಪೊಲೀಸರು ಭಾನುವಾರ ಬೆಳಗ್ಗೆ ಸುಮಾರು 7.30 ರ ಬಳಿಕ ರೈಲುಗಳ ಸಂಚಾರಕ್ಕೆ ಮಾಡಿಕೊಟ್ಟರು.

ನಿನ್ನೆಯಷ್ಟೆ ಪಠಾಣ್‌ಕೋಟ್‌ ನ ಸೇನಾ ವಾಯುನೆಲೆಯ ಮೇಲೆ ಉಗ್ರದಾಳಿ ನಡೆದಿರುವ ಹಿನ್ನಲೆಯಲ್ಲಿ ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎಲ್ಲಾ ರೈಲು ನಿಲ್ದಾಣಗಳಲ್ಲಿ   ಪ್ರಯಾಣಿಕರನ್ನು ವ್ಯಾಪಕವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೆ ಸಂಸತ್ ಭವನ, ಸರ್ಕಾರಿ ಕಚೇರಿಗಳು ಸೇರಿದಂತೆ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ವ್ಯಾಪಕ ಭದ್ರತೆ  ಒದಗಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT