ದೆಹಲಿ ರೈಲು ನಿಲ್ದಾಣ(ಸಂಗ್ರಹ ಚಿತ್ರ) 
ದೇಶ

ದೆಹಲಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ದ್ವಿಗುಣಗೊಂಡ ಭದ್ರತಾ ವ್ಯವಸ್ಥೆ

ದೆಹಲಿ ಲಖನೌ- ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನವದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭದ್ರತೆಯನ್ನು ದುಪ್ಪಟ್ಟುಗೊಳಿಸಲಾಗಿದೆ.

ನವದೆಹಲಿ: ದೆಹಲಿ ಲಖನೌ- ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನವದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭದ್ರತೆಯನ್ನು ದುಪ್ಪಟ್ಟುಗೊಳಿಸಲಾಗಿದೆ.
ಬೆದರಿಕೆ ಕರೆ ಬಂದ ನಂತರ ಗಾಜಿಯಾಬಾದ್ ಬಳಿ ದೆಹಲಿ ಲಖನೌ- ಶತಾಬ್ದಿ ರೈಲಿನಲ್ಲಿದ್ದ ಪ್ರಯಾಣಿಕರನ್ನು ಹೊರಕರೆತರಲಾಗಿದೆ. ಬೆಳಿಗ್ಗೆ 6 :30 ರ ವೇಳೆಗೆ ಬಾಂಬ್ ಬೆದರಿಕೆ ಕರೆ ಬಗ್ಗೆ ದೆಹಲಿ ಪೊಲೀಸರಿಂದ ಮಾಹಿತಿ ದೊರೆತಿದ್ದು ಗಾಜಿಯಾಬಾದ್ ರೈಲ್ವೆ ನಿಲ್ದಾಣವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿ ಭದ್ರತೆಯನ್ನು ದ್ವಿಗುಣಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನಿಜಾಮುದ್ದೀನ್ ಹಾಗೂ ನವದೆಹಲಿ ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ಪ್ರಯಾಣಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪಠಾಣ್ ಕೋಟ್ ನಲ್ಲಿನ ವಾಯುನೆಲೆ ಮೇಲೆ ಭಯೋತ್ಪಾದಕರ ದಾಳಿ ನಡೆದ ಬೆನ್ನಲ್ಲೇ ದೆಹಲಿ ರೈಲ್ವೆ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT