ನಕ್ಸಲರ ಶರಣಾಗತಿ (ಸಂಗ್ರಹ ಚಿತ್ರ) 
ದೇಶ

ಛತ್ತೀಸ್​ಗಢ: 11 ಮಾವೋವಾದಿ ನಕ್ಸಲೀಯರ ಶರಣಾಗತಿ

ವಿವಿಧ ಕಾರಣಗಳಿಂದಾಗಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದ 11 ಮಂದಿ ನಕ್ಸಲೀಯರು ಭಾನುವಾರ ಶರಣಾಗತರಾಗಿದ್ದಾರೆ...

ರಾಯ್ ಪುರ: ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದ 11 ಮಂದಿ ನಕ್ಸಲೀಯರು ಭಾನುವಾರ ಶರಣಾಗತರಾಗಿದ್ದಾರೆ.

ನಕ್ಸಲೀಯರನ್ನು ಸಮಾಜದಲ್ಲಿ ಸೇರಿಸುವ ಛತ್ತೀಸ್​ಗಢ ಸರ್ಕಾರ ಕ್ರಮದಿಂದಾಗಿ ಇಂದು ಕೊಂಡಗಾಂವ್ ಜಿಲ್ಲೆಯಲ್ಲಿ 11 ಮಂದಿ ನಕ್ಸಲೀಯರು ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಛತ್ತೀಸ್  ಗಢ ಸರ್ಕಾರದ ಶರಣಾಗತಿ ನೀತಿಯಿಂದ ಪ್ರಭಾವಿತಗೊಂಡು ಮತ್ತು ಸಂಘಟನೆಯ ಹಿರಿಯರು ತಮ್ಮನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವುದಕ್ಕೆ ಭ್ರಮನಿರಸನಗೊಂಡು ಅವರು  ಶರಣಾಗತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶರಣಾಗತರಾಗಿರುವವರ ಪೈಕಿ ಗಣೇಶ ಕೊರ್ರಂ (23 ವರ್ಷ) ಮತ್ತು ಲಲಿತ್ ಕಶ್ಯಪ್ (22 ವರ್ಷ) ಪ್ರಮುಖರಾಗಿದ್ದು, ಇವರ ತಲೆಗಳಿಗೆ ಸರ್ಕಾರ ತಲಾ 3 ಲಕ್ಷ ರೂಪಾಯಿಗಳ ಬಹುಮಾನ  ಘೊಷಣೆ ಮಾಡಿತ್ತು. ಈ ಇಬ್ಬರು ನಾಯಕರು ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿ ನಕ್ಸಲೀಯರ ಸಂದೇಶ ವಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೊಂಡಗಾಂವ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೆ.ಎಸ್. ವಟ್ಟಿ ಅವರು, ಸಂಘಟನೆಯ ಹಿರಿಯ ನಾಯಕರ ಕಿರುಕುಳದಿಂದ ಯುವಕರು  ಭ್ರಮ-ನಿರಸನಗೊಂಡಿದ್ದು, ಛತ್ತೀಸ್​ಗಢ ಸರ್ಕಾರದ ಶರಣಾಗತಿ ನೀತಿಯಿಂದ ಪ್ರಭಾವಿತರಾಗಿದ್ದಾರೆ. ಹೀಗಾಗಿ ಸರ್ಕಾರದ ಮುಂದೆ ಶರಣಾಗಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT