ಪಠಾಣ್ ಕೋಟ್ ನಲ್ಲಿ ಮತ್ತೆ ಉಗ್ರ್ರ ಅಟ್ಟಹಾಸ: ವಾಯುನೆಲೆಯಲ್ಲಿ ಮತ್ತೆ ಸ್ಫೋಟ 
ದೇಶ

ಪಠಾಣ್ ಕೋಟ್ ನಲ್ಲಿ ಮತ್ತೆ ಉಗ್ರರ ಅಟ್ಟಹಾಸ: ವಾಯುನೆಲೆಯಲ್ಲಿ ಮತ್ತೆ ಸ್ಫೋಟ

ಗುರುದಾಸ್ ಪುರದ ಪಠಾಣ್ ಕೋಟ್ ನಲ್ಲಿರುವ ಸೇನಾ ವಾಯುನೆಲೆಯಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸವನ್ನು ಮುಂದುವರೆಸಿದ್ದು, ಸೋಮವಾರ ಕೂಡ ವಾಯುನೆಲೆಯಲ್ಲಿ ಸ್ಫೋಟ ಸಂಭವಿಸಿರುವುದಾಗಿ...

ನವದೆಹಲಿ: ಗುರುದಾಸ್ ಪುರದ ಪಠಾಣ್ ಕೋಟ್ ನಲ್ಲಿರುವ ಸೇನಾ ವಾಯುನೆಲೆಯಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸವನ್ನು ಮುಂದುವರೆಸಿದ್ದು, ಸೋಮವಾರ ಕೂಡ ವಾಯುನೆಲೆಯಲ್ಲಿ ಸ್ಫೋಟ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಕಳೆದ ಮೂರು ದಿನಗಳಿಂದಲೂ ವಾಯುನೆಲೆ ಮೇಲೆ ದಾಳಿಯನ್ನು ಮುಂದುವರೆಸಿರುವ ಉಗ್ರರು ಈ ವರೆಗೂ 7ಯೋಧರನ್ನು ಬಲಿಪಡೆದಿದ್ದಾರೆ. ನಿನ್ನೆ ಕೂಡ ಇಬ್ಬರು ಉಗ್ರರು ಅಡಗಿ ಕುಳಿತಿರುವುದಾಗಿ ಹೇಳಲಾಗುತ್ತಿತ್ತು. ಇದರಂತೆ ವಾಯುನೆಲೆಯಲ್ಲಿ ಗುಂಡಿನ ಮೊರೆತ ಕೇಳಿಬರುತ್ತಿತ್ತು. ಇದರಂತೆ ಕಾರ್ಯಾಚರಣೆಗಿಳಿದಿದ್ದ ಯೋಧರು ಓರ್ವ ಉಗ್ರರನನ್ನು ಸದೆ ಬಡಿದಿದ್ದರು. ಮತ್ತೋರ್ವ ಉಗ್ರನನ್ನು ಜೀವಂತವಾಗಿ ಹಿಡಿಯಲು ಕಾರ್ಯಾಚರಣೆ ಮುಂದುವರೆಸಿದ್ದರು.

ಇದೀಗ ಮತ್ತೆ ವಾಯುನೆಲೆ ಮೇಲೆ ದಾಳಿ ಮುಂದುವರೆಸಿರುವ ಉಗ್ರರು ವಾಯುನೆಲೆಯ ಒಳಗೆ ಅವಿತು ಸ್ಫೋಟಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.ಇದರಂತೆ ಉಗ್ರರಿಗಾಗಿ ಭಾರತೀಯ ಯೋಧರು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, 100 ಕ್ಕೂ ಹೆಚ್ಚು ಯೋಧರು ಶೋಧನಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ.

ವಾಯುನೆಲೆಯಲ್ಲಿದ್ದ ಯುದ್ಧವಿಮಾನ ಮತ್ತು ಹೆಲಿಕಾಪ್ಚರ್ ಗಳ ಧ್ವಂಸವೇ ಉಗ್ರರ ಗುರಿಯಾಗಿದ್ದು, ಸೇನಾ ವಾಯುನೆಲೆಯ ಮೇಲೆ ದಾಳಿ ಮಾಡಿರುವ ಉಗ್ರರು ಅಲ್ಲಿರುವ ಅತ್ಯಾಧುನಿಕ ಯುದ್ಧ ವಿಮಾನ ಮತ್ತು ಯುದ್ಧ ಹೆಲಿಕಾಪ್ಟರ್ ಗಳನ್ನು ಧ್ವಂಸ ಮಾಡುವುದಕ್ಕಾಗಿಯೇ ದಾಳಿ ಮಾಡಿದ್ದಾರೆ ಎಂದು ಸೇನಾಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT