ಜೆ. ಜಯಲಲಿತಾ 
ದೇಶ

ತಮಿಳ್ನಾಡು ಸರ್ಕಾರದಿಂದ 14 ಲಕ್ಷ ಕುಟುಂಬಗಳಿಗೆ ಜಲಪ್ರಳಯ ಪರಿಹಾರ ಧನ

ತಮಿಳ್ನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಸೋಮವಾರ 14 ಲಕ್ಷ ಕುಟುಂಬಗಳಿಗೆ ಜಲಪ್ರಳಯ ಪರಿಹಾರ ಧನ ಬಿಡುಗಡೆ...

ಚೆನ್ನೈ: ತಮಿಳ್ನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಸೋಮವಾರ  14 ಲಕ್ಷ ಕುಟುಂಬಗಳಿಗೆ ಜಲಪ್ರಳಯ ಪರಿಹಾರ ಧನ ಬಿಡುಗಡೆ ಮಾಡಿದ್ದಾರೆ. ಈ ಪರಿಹಾರಧನ  ಮಂಗಳವಾರ ಆಯಾ ಕುಟುಂಬಗಳ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. 
ಸೋಮವಾರ ರು. 700 ಕೋಟಿ ಪರಿಹಾರ ಧನ ಬಿಡುಗಡೆಯಾಗಿದ್ದು, ಇನ್ನುಳಿದ ಹಣ ಜನವರಿ 11ಕ್ಕೆ ಬಿಡುಗಡೆಯಾಗಲಿದೆ ಎಂದು ಜಯಲಲತಾ ಹೇಳಿಕೆ  ನೀಡಿದ್ದಾರೆ.
ಸರ್ಕಾರದ ಯೋಜನೆ ಪ್ರಕಾರ ಕುಟುಂಬಗಳು ಸದಸ್ಯರನ್ನು ಕಳೆದುಕೊಂಡಿದ್ದರೆ ಅವರಿಗೆ  ರು. 10,000 ಮತ್ತು ವಿಶೇಷ ಪರಿಹಾರ ಧನ ರು.  5000 ನೀಡಲಾಗುವುದು.  ಇದರೊಂದಿಗೆ 10 ಕೆಜಿ ಅಕ್ಕಿ, ಧೋತಿ ಮತ್ತು ಸೀರೆಯನ್ನು ನೀಡಲಾಗುವುದು. ಅದೇ ವೇಳೆ ಇನ್ನಿತರ ನಾಶ ನಷ್ಟ ಅನುಭವಿಸಿದ ಕುಟುಂಬಗಳಿಗೆ ರು. 5000 ಮತ್ತು 10 ಕೆಜೆ ಅಕ್ಕಿ, ಧೋತಿ ಮತ್ತು ಸೀರೆ  ನೀಡಲಾಗುವುದು. 
ಚೆನ್ನೈ ಜಲಪ್ರಳಯದಲ್ಲಿ 4.93 ಲಕ್ಷ ಜನರಿಗೆ ಹಾನಿಯಾಗಿದ್ದು,  25.48 ಲಕ್ಷ ಮನೆಗಳು ನಾಶವಾಗಿವೆ. ಇಲ್ಲಿನ ಅಂಕಿ ಅಂಶ ಪ್ರಕಾರ 14 ಲಕ್ಷ ಕುಟುಂಬಗಳು ಸಂಕಷ್ಟಕ್ಕೊಳಗಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT