ದೇಶ

ಸ್ನೇಹ ಸೂಚಕವಾಗಿ ಉದ್ಧವ್ ಠಾಕ್ರೆಗೆ ಹುಲಿಯ ಪ್ರತಿಕೃತಿ ನೀಡಲಿರುವ ಬಿಜೆಪಿ

ಶಿವಸೇನೆ- ಬಿಜೆಪಿ ನಡುವೆ ಉಂಟಾಗಿರುವ ಬಿರುಕನ್ನು ದೂರ ಮಾಡುವ ನಿಟ್ಟಿನಲ್ಲಿ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆಗೆ ಹುಲಿಯ ಪ್ರತಿಕೃತಿ ನೀಡಲು ಬಿಜೆಪಿ ನಿರ್ಧರಿಸಿದೆ.

ಮುಂಬೈ: ಶಿವಸೇನೆ- ಬಿಜೆಪಿ ನಡುವೆ ಉಂಟಾಗಿರುವ ಬಿರುಕನ್ನು ದೂರ ಮಾಡುವ ನಿಟ್ಟಿನಲ್ಲಿ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆಗೆ ಹುಲಿಯ ಪ್ರತಿಕೃತಿ ನೀಡಲು ಬಿಜೆಪಿ ನಿರ್ಧರಿಸಿದೆ.
ಹುಲಿ ಶಿವಸೇನೆಯ ಚಿಹ್ನೆಯೂ ಆಗಿದ್ದು, ಉದ್ಧವ್ ಠಾಕ್ರೆ ಅವರಿಗೆ ನೆಚ್ಚಿನ ಪ್ರಾಣಿಯೂ ಆಗಿದೆ. ಮುಂದಿನ ವಾರ ಮಹಾರಾಷ್ಟ್ರದ ಅರಣ್ಯ ಇಲಾಖೆಯ ಸಚಿವರಾದ ಸುಧೀರ್ ಮುಂಗಂತಿವರ್‍ ಉದ್ಧವ್ ಠಾಕ್ರೆ ಅವರ ನಿವಾಸಕ್ಕೆ ಭೇಟಿ ನೀಡಲಿದ್ದು ಉದ್ಧವ್ ಠಾಕ್ರೆಗೆ ಉಡುಗೊರೆಯನ್ನು ನೀಡಲಿದ್ದಾರೆ.
ಉದ್ಧವ್ ಠಾಕ್ರೆ ಅವರಿಗೆ ಹುಲಿಯ ಪ್ರತಿಕೃತಿಯನ್ನು ನೀಡುತ್ತಿರುವುದನ್ನು ಖಚಿತಪಡಿಸಿರುವ ಸುಧೀರ್ ಮುಂಗಂತಿವರ್‍, ಇದೊಂದು ಸ್ನೇಹ ಸೂಚಕ ಉಡುಗೊರೆಯಷ್ಟೆ ಇದಕ್ಕೆ ರಾಜಕೀಯ ಅರ್ಥಗಳನ್ನು ಕಲ್ಪಿಸಬೇಡಿ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ಮುಖಂಡರೊಬ್ಬರು, ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಅದರ ನಿಲುವು ಬದಲಿಸಿಕೊಳ್ಳಬೇಕು, ಬಿಜೆಪಿಯೊಂದಿಗೆ ಉದ್ಧವ್ ಠಾಕ್ರೆ ಸೈದ್ಧಾಂತಿಕ ವೈರತ್ವ ಹೊಂದಿಲ್ಲ. ಕೆಲವು ವಿಷಯಗಳಲ್ಲಿ ಬಿಜೆಪಿಯ ನಿಲುವುಗಳನ್ನು ಪ್ರಶ್ನೆ ಮಾಡುತ್ತಾರಷ್ಟೆ. ಅದನ್ನು ಬಿಜೆಪಿ ಸರಿಪಡಿಸಿಕೊಂಡರೆ ಯಾವುದೇ ಉಡುಗೊರೆ ಇಲ್ಲದೇ ಉದ್ಧವ್ ಠಾಕ್ರೆ ಸಂತಸಗೊಳ್ಳುತ್ತಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT