ಐಎಸ್ಐ 
ದೇಶ

ಬಿಎಸ್ಎನ್ಎಲ್ ನೌಕರರ ಮೂಲಕ ರಕ್ಷಣಾ ಸಂಪರ್ಕ ವಿವರ ಪಡೆಯಲು ಯತ್ನಿಸಿದ್ದ ಐಎಸ್ಐ

ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ಐ ಭಾರತದ ರಕ್ಷಣಾ ಕೇಂದ್ರಗಳ ಸಂಪರ್ಕ ವಿವರಗಳನ್ನು ಪಡೆಯಲು ಯತ್ನಿಸುತ್ತಿದೆ.

ಜೈಸಲ್ಮೇರ್: ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ಐ ಭಾರತದ ರಕ್ಷಣಾ ಕೇಂದ್ರಗಳ ಸಂಪರ್ಕ ವಿವರಗಳನ್ನು ಪಡೆಯಲು ಯತ್ನಿಸುತ್ತಿದ್ದು, ಪರಿಶೀಲನೆ ನಡೆಸದೆ ತಮಗೆ ಕರೆ ಮಾಡಿರುವವರೊಂದಿಗೆ ಸಂಪರ್ಕ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ರಾಜಸ್ತಾನದ ರಕ್ಷಣಾ ಕೇಂದ್ರಕ್ಕೆ ಸೂಚನೆ ನೀಡಲಾಗಿದೆ.
ಇಂಟರ್ ನೆಟ್ ಕರೆ ಮೂಲಕ ರಕ್ಷಣಾ ಕೇಂದ್ರದ ವಿವರಗಳನ್ನು ಪಡೆಯಲು ಯತ್ನಿಸುತ್ತಿರುವ ಐಎಸ್ಐ ಬಗ್ಗೆ ಎಚ್ಚರದಿಂದ ಇರುವಂತೆ ರಕ್ಷಣಾ ಕೇಂದ್ರದ ಅಧಿಕಾರಿಗಳಿಗೆ ಜೈಸಲ್ಮೇರ್ ಜಿಲ್ಲಾ ಪೊಲೀಸರು ಸೂಚನೆ ನೀಡಿದ್ದಾರೆ. ಬಿಎಸ್ಎನ್ಎಲ್ ಕಚೇರಿಯ ನೌಕರರ ಮೂಲಕ ಭಾರತೀಯ ಸೇನೆಯಲ್ಲಿರುವ ಸೈನಿಕರು ಹಾಗೂ ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆಹಾಕಲು ಯತ್ನಿಸುತ್ತಿದೆ. 2015 ರ ಸೆಪ್ಟೆಂಬರ್ ಹಾಗೂ ಡಿಸೆಂಬರ್ ನಲ್ಲಿ ಇಂಥಹ ಕರೆಗಳು ಐಎಸ್ಐ ನಿಂದ ಬಂದಿತ್ತು ಎಂಬ ಮಾಹಿತಿಯೂ ಬಹಿರಂಗವಾಗಿದೆ.
ಪೋಕರಾನ್ ನ ಉಪವಿಭಾಗದಲ್ಲಿ ಸೇನಾ ಅಭ್ಯಾಸ ನಡೆಯುತ್ತಿರಬೇಕಾದರೆ, ಇಂಟರ್ ನೆಟ್ ಕರೆ ಮಾಡಿದ್ದ ಐಎಸ್ಐ, ಅಧಿಕಾರಿಗಳು ಹಾಗೂ ಸೈನಿಕರ ದೂರವಾಣಿ ಬಿಲ್ ಬಗ್ಗೆ ಮಾಹಿತಿ ಕೇಳಿತ್ತು. ಅಲ್ಲದೇ ಭಾರತದಲ್ಲಿರುವ ಸೇನಾ ಪ್ರದೇಶಗಳ ಬಗ್ಗೆ ಮಾಹಿತಿಯನ್ನೂ ಕೇಳಿತ್ತು. ಈ ಕರೆ ಪಾಕಿಸ್ತಾನದಿಂದ ಬಂದಿತ್ತಾದರೂ, ಇಂಟರ್ ನೆಟ್ ಕಾಲಿಂಗ್ ಮೂಲಕ ಕರೆ ಮಾಡಿರುವ ಸ್ಥಳವನ್ನು ಗೌಪ್ಯವಾಗಿಡಲಾಗಿತ್ತು. ಆದರೂ ಬಿಎಸ್ಎನ್ಎಲ್ ಸಂಸ್ಥೆ ಕರೆಯ ನಿಜವಾದ ಸ್ಥಳವನ್ನು ಗುರುತಿಸಲು ಯಶಸ್ವಿಯಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಗಡಿ ಪ್ರದೇಶದಲ್ಲಿರುವ ಸೇನೆಗೆ ಪಾಕಿಸ್ತಾನದಿಂದ ಬರುವ ಇಂತಹ ಗೌಪ್ಯ ಕರೆಗಳು ಅಪಾಯಕಾರಿಯಾಗಿರುತ್ತವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನಿಶ್ ಓಜಾ ಹೇಳಿದ್ದಾರೆ. ಈ ಬಗ್ಗೆ ಎಚ್ಚರದಿಂದ ಇರುವಂತೆ ಹಾಗೂ ಸ್ವಯಂ ನಿಯಂತ್ರಣ ವಿಧಿಸಿಕೊಳ್ಳುವಂತೆ ರಕ್ಷಣಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮನಿಶ್ ಓಜಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT